Home » Tamilunadu: ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ – ಮಾಜಿ ಸಿಎಂ, ಜಯಲಲಿತಾ ಆಪ್ತ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷ ಸೇರ್ಪಡೆ

Tamilunadu: ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ – ಮಾಜಿ ಸಿಎಂ, ಜಯಲಲಿತಾ ಆಪ್ತ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷ ಸೇರ್ಪಡೆ

0 comments

Hindu neighbor gifts plot of land

Hindu neighbour gifts land to Muslim journalist

Tamilunadu : ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಲ್ಲಿನ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆ ನಡೆದಿದೆ. ಎಐಎಡಿಎಂಕೆಯ ಉನ್ನತ ನಾಯಕ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ (O Panneerselvam) ಅವರು ಎಂ.ಕೆ. ಸ್ಟಾಲಿನ್ (MK Stalin) ಸಮ್ಮುಖದಲ್ಲಿ ಡಿಎಂಕೆ ಸೇರಿದ್ದಾರೆ.

ಯಸ್, ಎಐಎಡಿಎಂಕೆಯ (AIADMK) ಮಾಜಿ ನಾಯಕ ಹಾಗೂ ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಓ. ಪನ್ನೀರ್‌ಸೆಲ್ವಂ ಅವರು ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರ ಸಮ್ಮುಖದಲ್ಲಿ ಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂನಲ್ಲಿ ಒ. ಪನ್ನೀರ್‌ಸೆಲ್ವಂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಪನ್ನೀರ್‌ಸೆಲ್ವಂ ಅವರ ಬೆಂಬಲಿಗರು ಬೆಳಿಗ್ಗೆಯಿಂದಲೇ ಸ್ಥಳದ ಹೊರಗೆ ಜಮಾಯಿಸಿ ಘೋಷಣೆಗಳನ್ನು ಕೂಗಿದರು.

ಈ ನಿರ್ಧಾರವನ್ನು ನಾನು ಸ್ವತಃ ತೆಗೆದುಕೊಂಡಿದ್ದೇನೆ. ಎಐಎಡಿಎಂಕೆ (AIADMK) ನಾಯಕತ್ವದೊಂದಿಗೆ ಕಳೆದ ಕೆಲವು ವರ್ಷಗಳಿಂದ ಹೊಂದಿದ್ದ ಕಹಿ ಅನುಭವಗಳಿಗೆ ಪೂರ್ಣವಿರಾಮ ಹಾಕಲು ಈ ಹೆಜ್ಜೆ ಇಟ್ಟಿದ್ದಾಗಿ ಪನ್ನೀರ್‌ಸೆಲ್ವಂ ಸ್ಪಷ್ಟಪಡಿಸಿದ್ದಾರೆ.  ಅಲ್ಲದೆ ಮುಖ್ಯಮಂತ್ರಿ ಸ್ಟಾಲಿನ್ ಅವರು ಜನರಿಗೆ ಉತ್ತಮ ಆಡಳಿತವನ್ನು ನೀಡುತ್ತಿದ್ದಾರೆ ಮತ್ತು ಜನರು ಅದನ್ನು ಗಮನಿಸುತ್ತಿದ್ದಾರೆ. ಎಡಪ್ಪಾಡಿ ಪಳನಿಸ್ವಾಮಿ ಅವರು ದಕ್ಷಿಣ ತಮಿಳುನಾಡಿನ ಯಾವುದೇ ನಾಯಕರು ಪ್ರಬಲರಾಗದಂತೆ ತಡೆಯಲು ಉತ್ಸುಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ದ್ರಾವಿಡ ಚಳವಳಿ ಮತ್ತು ದ್ರಾವಿಡ ಸಿದ್ಧಾಂತವನ್ನು ಉಳಿಸಲು ಡಿಎಂಕೆ ಮಾತ್ರ ಶ್ರಮಿಸುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ನಾನು ಕೇವಲ ಒಬ್ಬ ಕಾರ್ಯಕರ್ತನಾಗಿ ಪಕ್ಷಕ್ಕೆ ಸೇರಿದ್ದೇನೆ. ಪಕ್ಷದ ಇತರ ಕಾರ್ಯಕರ್ತರಂತೆ ಒಬ್ಬನಾಗಿ ನಾನು ಪಕ್ಷದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಪನ್ನೀರ್‌ಸೆಲ್ವಂ ತಿಳಿಸಿದ್ದಾರೆ.

You may also like