Mysore : ಹೆತ್ತವರು, ಸಂಬಂಧಿಕರು ತಮ್ಮ ಮಕ್ಕಳು, ಸಂಬಂಧಿಕರ ಮಕ್ಕಳು ಚೆನ್ನಾಗಿ ಓದಿ ದೊಡ್ಡ ಹುದ್ದೆಗೆ ಏರಬೇಕೆಂಬ ಕನಸನ್ನು ಹೊಂದಿರುತ್ತಾರೆ. ಆದರೆ ಇಲ್ಲೊಬ್ಬಳು ಪಿಯುಸಿ ವಿದ್ಯಾರ್ಥಿ ನಿಗೆ ನೀನಿನ್ನು ಓದುವುದು ಬೇಡ ಎಂದು ಸೋದರ ಮಾವನೇ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಪಿಯುಸಿ ಓದುತ್ತಿದ್ದ ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ ಆತ ಈ ರೀತಿ ಮಾಡಿದ್ದಾನೆ ಎನ್ನಲಾಗಿದೆ.
ಸದ್ಯ ಯುವತಿ ಪೂರ್ಣಿಮಾಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಣ್ಣ ಸೇರಿ 7 ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.