ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ರಥಬೀದಿ ನಿವಾಸಿ ಸತೀಶ್ ಪ್ರಭು (59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ತಮ್ಮ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಪರೀಕ್ಷೆ ಮಾಡಿ ಬ್ರೇನ್ ಹೇಮರೇಜ್ ಅಗಿರುವುದು ಹೇಳಿದ್ದು, ಕೆಲ ಹೊತ್ತಿನಲ್ಲೇ ಅವರು ಸಾವಿಗೀಡಾಗಿದ್ದಾರೆ.
ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಪತ್ನಿ ಪುತ್ರನನ್ನು ಅಗಲಿದ್ದಾರೆ.
ಕಳೆದ ಬಾರಿ ಬಿಜೆಪಿಯಿಂದ ಅಸಮಾಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಕೂಡಾ ಸರಿಹೊಂದಲು ಸಾಧ್ಯವಾಗದೇ ಮತ್ತೆ ಮಾತೃಪಕ್ಷಕ್ಕೆ ಸೇರಿದ್ದರು.

