ಉಜಿರೆ: ಉತ್ತಮ ಸಂವಹನ ಕಲೆ ಹಾಗೂ ಕೌಶಲವನ್ನು ಬೆಳೆಸಿಕೊಂಡರೆ ತೆರಿಗೆ ಲೆಕ್ಕಾಚಾರವನ್ನು ಕೂಡಾ ವೃತ್ತಿಯಾಗಿ ಆಯ್ಕೆ ಮಾಡಿಕೊಂಡು ಉತ್ತಮ ಸೇವೆ-ಸಾಧನೆ ಮಾಡಿ ಯಶಸ್ಸು ಪಡೆಯಬಹುದು ಎಂದು ಬೆಳ್ತಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿಟ್ಲ ಹೇಳಿದರು.

ಅವರು ಮಂಗಳವಾರ ಉಜಿರೆಯಲ್ಲಿ ರುಡ್ಸೆಟ್ ಸಂಸ್ಥೆಯಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು. ಆಧುನಿಕ ವ್ಯವಹಾರದಲ್ಲಿ ತೆರಿಗೆ ಪಾವತಿ ಹಾಗೂ ಲೆಕ್ಕಾಚಾರ ಅತ್ಯಂತ ಮಹತ್ವವಾಗಿದೆ ಎಂದು ಹೇಳಿ ಶುಭ ಹಾರೈಸಿದರು. ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅಧ್ಯಕ್ಷತೆ ವಹಿಸಿದರು. ಶಿಬಿರಾರ್ಥಿಗಳ ಪರವಾಗಿ ಶಾರೋನ್, ವೀಕ್ಷಿತಾ ಮತ್ತು ಅಮಿಶಾ ತರಬೇತಿ ಬಗ್ಯೆ ಅನಿಸಿಕೆ ವ್ಯಕ್ತಪಡಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಸ್ವಾಗತಿಸಿದರು. ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು.
