Home » ಖಮೇನಿ ಹತ್ಯೆ ಕುರಿತು ಸ್ಟೇಟಸ್‌; ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ

ಖಮೇನಿ ಹತ್ಯೆ ಕುರಿತು ಸ್ಟೇಟಸ್‌; ಅನ್ಯಕೋಮಿನವರಿಂದ ಹಿಂದೂ ಯುವಕನಿಗೆ ಹಲ್ಲೆ

0 comments
Shimoga

ಕೊಪ್ಪಳ: ಇರಾನ್‌ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ವಿಚಾರಕ್ಕೆ ಸಂಬಂಧಪಟ್ಟಂತೆ ಕರ್ನಾಟಕದ ಕೊಪ್ಪಳದಲ್ಲಿ ಖಮೇನಿ ಸಾವಿನ ಕುರಿತು ಇನ್‌ಸ್ಟಾಗ್ರಾಂನಲ್ಲಿ ಸ್ಟೇಟಸ್‌ ಹಾಕಿದ್ದಕ್ಕೆ ಆಕ್ರೋಶಗೊಂಡ ಅನ್ಯಕೋಮಿನ ಯುವಕರ ಗುಂಪೊಂದು ಹಿಂದೂ ಯುವಕನ ಮೇಲೆ ಭೀಕರ ಹಲ್ಲೆ ಮಾಡಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಚಂದ್ರಶೇಖರ್‌ ಎಂದು ಗುರುತಿಸಲಾಗಿದೆ. ಈತ ಖರ್ಜೂರದ ವ್ಯಾಪಾರಿಯಾಗಿದ್ದು, ಅಮೆರಿಕ ಮತ್ತು ಇಸ್ರೇಲ್‌ ದಾಳಿಯಲ್ಲಿ ಅಲಿ ಖಮೇನಿ ಸಾವಿಗೀಡಾಗಿರುವ ಕುರಿತು ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸ್ಟೋರಿ ಹಾಕಿದ್ದ. ಈ ಸ್ಟೋರಿ ಕಂಡು ಐದಾರು ಮಂದಿ ಅನ್ಯಕೋಮಿನ ಯುವಕರು ಚಂದ್ರಶೇಖರ್‌ ವ್ಯಾಪಾರ ಮಾಡುತ್ತಿದ್ದ ಸ್ಥಳಕ್ಕೆ ಬಂದು ” ನಮ್ಮ ಸಮಾಜದ ಬಗ್ಗೆ ಏಕೆ ಸ್ಟೋರಿ ಹಾಕಿದೆ, ನಮಗೆ ನೋವಾಗಿದೆ” ಎಂದು ಕಿರುಚಾಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆ ಮಾಡಿದ್ದು ಮಾತ್ರವಲ್ಲದೇ ಮನೆಗೆ ನುಗ್ಗಿ ಹೊಡೆಯುವುದಾಗಿಯೂ, ಜೀವ ಬೆದರಿಕೆ ಕೂಡಾ ಹಾಕಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಭಯಭೀತರಾದ ಚಂದ್ರಶೇಖರ್‌ ತಡರಾತ್ರಿ ಗಂಗಾವತಿ ನಗರ ಪೊಲೀಸ್‌ ಠಾಣೆಗೆ ಬಂದು ದೂರನ್ನು ನೀಡಿದ್ದಾನೆ.

You may also like