ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಮಾ.4 ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಹಾನಿಯಾಗಿದೆ. ಉಜಿರೆ ನಿನ್ನಿಕಲ್ಲು ಗುಡ್ಡಕ್ಕೆ ಬೆಂಕಿ ಬಿದ್ದ ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆಯ ಕಮಲ,ಸಂತೋಷ್, ಸದಾನಂದ, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಸ್ಥಳೀಯರಾದ ಗುರುಪ್ರಸಾದ್ ಕೋಟ್ಯಾನ್, ವೆಂಕಪ್ಪ ಮುಂಡತ್ತೋಡಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಬೇಸಿಗೆ ಸಮಯದಲ್ಲಿ ಪ್ರತಿ ವರ್ಷ ನಿನ್ನಿಕಲ್ಲು ಗುಡ್ಡಕ್ಕೆ ಬೆಂಕಿ ಬೀಳುವುದು ಸಾಮಾನ್ಯವಾಗಿದೆ. ಕಾಡಿನಲ್ಲಿ ಹುಲ್ಲುಗಾವಲು ಹೆಚ್ಚಾಗಿದ್ದರಿಂದ ವಿದ್ಯುತ್ ಸೋರಿಕೆಯಿಂದ ಬೆಂಕಿ ಬಿದ್ದ ತಕ್ಷಣವೇ ಎಲ್ಲ ಕಡೆ ವ್ಯಾಪಿಸಿದೆ. ಕಾಡಿನ ರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರೂ ಅಗ್ನಿ ಅವಘಡ ಸಂಭವಿಸುತ್ತಿದೆ. ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಕಾಡಿನ ರಕ್ಷಣೆಗೆ ಕೈ ಜೋಡಿಸಬೇಕು’ ಎಂದು ಅರಣ್ಯಾಧಿಕಾರಿ ಕಮಲ ಮನವಿ ಮಾಡಿದ್ದಾರೆ.
