Bihar: ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಗ್ಗೆ ದೊಡ್ಡ ಸುದ್ದಿ ಬರುತ್ತಿದೆ. ನಿತಿಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

ಯಸ್, ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳ ಸಾಧ್ಯತೆ ಕುರಿತು ಚರ್ಚೆಗಳು ಗರಿಗೆದರಿವೆ. ಮುಖ್ಯಮಂತ್ರಿ Nitish Kumar ರಾಜ್ಯಸಭೆಗೆ ತೆರಳುವ ಸಾಧ್ಯತೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಮಾತುಕತೆ ನಡೆಯುತ್ತಿರುವುದಾಗಿ ಮೂಲಗಳು ತಿಳಿಸಿವೆ. ಇದರ ನಂತರ, ಬಿಜೆಪಿ ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಳ್ಳಲಿದೆ. ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಎನ್ಡಿಎ ಮೈತ್ರಿಕೂಟ ಅಧಿಕಾರಕ್ಕೆ ಮರಳಿದ ಕೆಲವೇ ತಿಂಗಳುಗಳ ನಂತರ ಈ ಪ್ರಮುಖ ಬದಲಾವಣೆ ನಡೆಯುತ್ತಿದೆ ಎನ್ನಲಾಗಿದೆ.
ರಾಜ್ಯಸಭೆಗೆ ನಿತೀಶ್ ಕುಮಾರ್ ಪ್ರವೇಶದೊಂದಿಗೆ ರಾಜ್ಯ ರಾಜಕೀಯವನ್ನು ತೊರೆಯುತ್ತಾರೆ ಎಂದು ನಂಬಲಾಗಿದೆ. ಆದಾಗ್ಯೂ, ನಿತೀಶ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಮತ್ತು ರಾಜ್ಯಸಭೆಗೆ ನಿರ್ಗಮಿಸಲು ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ಇತ್ತೀಚೆಗೆ ಜೆಡಿಯು ರಾಷ್ಟ್ರೀಯ ಕಾರ್ಯಾಧ್ಯಕ್ಷ Sanjay Jha ಪಾಟ್ನಾದಲ್ಲಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಕೇಂದ್ರ ಸಚಿವ ಹಾಗೂ ಲಾಲನ್ ಸಿಂಗ್ ಎಂದೇ ಪರಿಚಿತರಾದ Rajiv Ranjan Singh ಅವರ ಭೇಟಿಯೂ ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡಿದೆ.
ನಿತೀಶ್ ಕುಮಾರ್ ಈ ಹಿಂದೆ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಮತ್ತು ರೈಲ್ವೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 2015ರಿಂದ ಬಿಹಾರದ ಮುಖ್ಯಮಂತ್ರಿಯಾಗಿರುವ ನಿತೀಶ್, ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿದ್ದಾರೆ.

