ಕರ್ನಾಟಕ ಬಜೆಟ್: 17 ನೇ ಬಜೆಟ್ ಮಂಡನೆಯಲ್ಲಿ ಸಿದ್ದರಾಮಯ್ಯ ಅವರು ಕರಾವಳಿಗೆ ಮಹತ್ವ ನೀಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕ ದೇವಾಲಯಗಳ ಮೂಲ ಸೌಕರ್ಯವೃದ್ಧಿಗೆ ಸರಕಾರ ಮುಂದಾಗಿದ್ದು, ಬಜೆಟ್ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸಿದೆ..

ಪ್ರಾಧಿಕಾರ ರಚನೆಯ ಪ್ರಮುಖ ಉದ್ದೇಶಗಳು:
ಸಮಗ್ರ ಅಭಿವೃದ್ಧಿ: ದೇವಾಲಯದ ಸುತ್ತಮುತ್ತಲಿನ ರಸ್ತೆಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು.
ಭಕ್ತರ ಸೌಲಭ್ಯ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಭಕ್ತರ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳು, ಸರತಿ ಸಾಲಿನ ವ್ಯವಸ್ಥೆ ಮತ್ತು ದಾಸೋಹ ಭವನಗಳ ಆಧುನೀಕರಣ.
ಪರಿಸರ ಸಂರಕ್ಷಣೆ: ಕುಕ್ಕೆ ಸುಬ್ರಹ್ಮಣ್ಯವು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿದೆ. ಪ್ರಾಧಿಕಾರ ರಚನೆಯಿಂದ ಇಲ್ಲಿನ ಪರಿಸರ ಸಮತೋಲನ ಕಾಪಾಡುತ್ತಾ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ.
ಆಡಳಿತಾತ್ಮಕ ಪಾರದರ್ಶಕತೆ: ದೇವಾಲಯದ ಆದಾಯವನ್ನು ಸಮರ್ಪಕವಾಗಿ ಆಯಾ ಕ್ಷೇತ್ರಗಳ ಅಭಿವೃದ್ಧಿಗೇ ಬಳಸಲು ಈ ಸ್ವಾಯತ್ತ ಪ್ರಾಧಿಕಾರಗಳು ನೆರವಾಗಲಿವೆ.
ಈ ನಿರ್ಧಾರದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿದಂತಾಗಿದೆ.

