Bengaluru : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗಂಡು ಹಾಗೂ ಹೆಣ್ಣಿನ ನಗ್ನ ಫೋಟೋ, ಹೂವಿನ ಹಾರ ಸೇರಿ ಇನ್ನಿತರ ವಸ್ತುಗಳಿದ್ದ ಪಾರ್ಸೆಲ್ವೊಂದು ಬಂದಿದ್ದು, ವಾಮಾಚಾರ ಮಾಡಿದ್ರಾ ಎಂಬ ಶಂಕೆ ಮೂಡಿದೆ.

ಯಸ್, ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಪಾರ್ಸೆಲ್ ಒಂದು ಬಂದಿದ್ದು ಪಾರ್ಸೆಲ್ನಲ್ಲಿ ಮಹಿಳೆ ಹಾಗೂ ಪುರುಷನ ಬೆತ್ತಲೆ ಫೋಟೋ, ಅದರ ಸುತ್ತಲು ಕೊಳೆತ ಟೊಮೆಟೋ, ಹೂವಿನ ಹಾರ, ಅದರ ಮೇಲೆ ಕಬ್ಬಿಣದ ಪೀಸ್ ಹಾಗೂ ಟೂತ್ ಪೇಸ್ಟ್ ಇಟ್ಟಿದ್ದಾರೆ. ಇದನ್ನು ಕಂಡು ಅಧಿಕಾರಿಗಳು ಶಾಕ್ ಆಗಿದ್ದಾರೆ.
ಇದರಿಂದ ಅಲ್ಲಿನ ಸಿಬ್ಬಂದಿ ಮಾನಸಿಕ ಸ್ಥಿತಿ ಪರಿಣಾಮ ಬೀರಿದ್ದು, ಕರ್ತವ್ಯದ ಆಸಕ್ತಿ ತೋರದಂತೆ ಕಾಣುತ್ತಿದೆ. ಸದ್ಯ ಸಿಬ್ಬಂದಿ ನಿರಾಸಕ್ತಿ ನೋಡಿ ಕೆಐಎಎಲ್ ಸಿಬ್ಬಂದಿ ದೂರು ನೀಡಿ, ವಾಮಚಾರ ಮಾಡಿದವರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.
