ಕರ್ನಾಟಕದ ಉಪಮುಖ್ಯಮಂತ್ರಿ ಅಸ್ಸಾಂ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಉಸ್ತುವಾರಿ ಡಿ.ಕೆ.ಶಿವಕುಮಾರ್ ರೆಸಾರ್ಟ್ ರಾಜಕೀಯ ಆರಂಭಿಸಿದ್ದು, 12 ಶಾಸಕರು ಬೆಂಗಳೂರು ನಗರದ ಹೊರವಲಯದ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ.

126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆ ಆಗುವ ನಿರೀಕ್ಷೆ ಇದ್ದು, ಚುನಾವಣೆಯ ಸಮಯದಲ್ಲಿ ಅಪರೇಷನ್ ಕಮಲ ನಡೆಯುವ ನಿರೀಕ್ಷೆ ಹಿನ್ನೆಲೆಯಲ್ಲಿ ಅಸ್ಸಾಂನ 12 ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ.
ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಕೆಲವು ದಿನಗಳ ಹಿಂದೆ ಬಿಜೆಪಿ ಸೇರಿದ್ದು, ಅಸ್ಸಾಂ ಕಾಂಗ್ರೆಸ್ನ ಹಾಲಿ ಅಧ್ಯಕ್ಷ ಗೌರವ್ ಗೊಗೊಯ್ ಡಿ.ಕೆ.ಶಿವಕುಮಾರ್ ಜೊತೆ ಮಾತನಾಡಿ, ಅಪರೇಷನ್ ಕಮಲವಾಗುವ ಸಾಧ್ಯತೆಯಿದೆ ಎನ್ನುವ ಮಾಹಿತಿಯನ್ನು ನೀಡಿದ್ದರು.
ಅಸ್ಸಾಂ ಕಾಂಗ್ರೆಸ್ ಶಾಸಕರನ್ನು ಉಳಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ 12 ಶಾಸಕರನ್ನು ರೆಸಾರ್ಟ್ಗೆ ಕಳಿಸಲಾಗಿದೆ. ಗುರುವಾರ ರಾತ್ರಿ ಎಲ್ಲರೂ ಬೆಂಗಳೂರಿಗೆ ಬಂದಿದ್ದು, ವಿಮಾನ ನಿಲ್ದಾಣದಿಂದ ರೆಸಾರ್ಟ್ಗೆ ಕಳಿಸಲಾಗಿದೆ.

