ಗುಂಡ್ಯದಲ್ಲಿ ಕೆಎಸ್ಆರ್ಟಿಸಿ ರಾಜಹಂಸ ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ನಡೆದಿದೆ.

ಸಕಲೇಶಪುರದಲ್ಲಿ ಮದುವೆಗೆ ಹೋಗಿ ಕೊಕ್ಕಡಕ್ಕೆ ವಾಪಸ್ ಬರುವ ಸಂದರ್ಭದಲ್ಲಿ ಅಪಘಾತ ನಡೆದಿದೆ. ಧರ್ಮಸ್ಥಳದಿಂದ ಮಧ್ಯಾಹ್ನ 2.30 ಕ್ಕೆ ಹೊರಟು ಬೆಂಗಳೂರು ಮೂಲಕ ತಿರುಪತಿ ಹೊರಟಿರುವ ರಾಜಹಂಸ ಬಸ್ ಮತ್ತು ಕಾರಿನ ನಡುವೆ ಗುಂಡ್ಯದ ಗಡಿ ದೇವಸ್ಥಾನದ ಸಮೀಪ ಈ ಅಪಘಾತ ನಡೆದಿದೆ.
ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧರ್ ಮರಕಡ, ಜನಾರ್ಧನ ಕೆರಿಮಾರ್ ಸಾವಿಗೀಡಾಗಿದ್ದು, ಸುರೇಶ್ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸಾರ್ವಜನಿಕರು ರಕ್ತಸಿಕ್ತವಾಗಿ ಬಿದ್ದವರನ್ನು ಸ್ಥಳೀಯರ ನೆರವಿನಿಂದ ಹೊರತೆಗೆಯುವ ಕೆಲಸ ಮಾಡಿದ್ದಾರೆ.

