Bagalakote : ಯುವಕನೋರ್ವ ಹೆಣ್ಣು ಮಕ್ಕಳು ಬಟ್ಟೆ ಬದಲಾಯಿಸುವುದನ್ನು ಕದ್ದು ನೋಡುತ್ತಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಗ್ರಾಮಸ್ಥರು ಆತನನ್ನು ಹಿಡಿದು ತಳಿಸುವಾಗ ಹೃದಯಘಾತದಿಂದ ಅಲ್ಲೇ ಸಾವನ್ನಪ್ಪಿರುವ ಅಮಾನುಷ ಘಟನೆ ನಡೆದಿದೆ.

ಯಸ್, ಬಾಗಲಕೋಟೆ ಜಿಲ್ಲೆಯಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವೇಳೆ ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಈ ವೇಳೆ ಶಾಲೆಯ ಮೇಲ್ಛಾವಣಿ ಮೇಲೆ ಕುಳಿತುಕೊಂಡು ಕೆಳಗಿದ್ದ ಕಾರ್ಯಕ್ರಮದತ್ತ ಕಲ್ಲು ಎಸೆದಿದ್ದಾನಂತೆ ಅಲ್ಲದೇ ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕಾಗಿ ಬಟ್ಟೆ ಬದಲಾಯಿಸುತ್ತಿದ್ದ ವೇಳೆ ಕಿಡಗಿಯಿಂದ ಇಣುಕಿ ನೋಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇದರಿಂದ ಸ್ಥಳೀಯರು ಯುವಕನನ್ನು ಹಿಡ್ದ್ಯು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ಎಂಬ ಮೂವರು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಸುದೀಪ್ ಪಾಂಗೆಯನ್ನು ತಕ್ಷಣ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾನೆ. ಮೃತನ ಸಹೋದರ ಮೂವರ ವಿರುದ್ಧ ದೂರು ನೀಡಿದ್ದಾನೆ.
