ಚಿತ್ರದುರ್ಗದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹೆಗ್ಗರೆ ಬಳಿ ನಡೆದಿದೆ. ಅಮರೇಶ್, ಮಂಜುನಾಥ್ ಮತ್ತು ಸಚಿನ್ ಎಂಬ ಮೂವರು ಸ್ಥಳದಲ್ಲೇ ಸಾವಿಗೀಡಾದವರು.

ಇಂದು ಬೆಳಗ್ಗೆ 7 ಗಂಟೆಗೆ ಈ ಅಪಘಾತ ನಡೆದಿದ್ದು, ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದ ಐದು ಸಬ್ ಇನ್ಸ್ಪೆಕ್ಟರ್ಗಳ ಕಾರು ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ತೀವ್ರತೆ ಎಷ್ಟಿತ್ತೆಂದರೆ ಕಾರು ಸುಮಾರು 300 ಮೀಟರ್ಗಳಷ್ಟು ಮುಂದಕ್ಕೆ ಎಳೆದೊಯ್ಯಿದ್ದಿತ್ತು ಎಂದು ಅಧಿಕಾರಿಗಳು ಹೇಳಿರುವ ಕುರಿತು ವರದಿಯಾಗಿದೆ.
ಗಾಯಗೊಂಡ ಲಕ್ಷ್ಮಣ್ ಮತ್ತು ಈಶ್ವರ್ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆಂದು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಅಪಘಾತ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

