ಕರ್ನಾಟಕದಲ್ಲಿ ಎಲ್ಲಾ ಜಯಂತಿಗಳನ್ನು ಆಚರಣೆ ಮಾಡುವ ಸಂದರ್ಭದಲ್ಲಿ ಹಾಕುವ ಡಿಜೆಗಳನ್ನು ನಿಷೇಧ ಮಾಡಬೇಕು ಎಂದು ಸಚಿವ ಸಂತೋಷ್ ಲಾಡ್ ಆಗ್ರಹ ಮಾಡಿದ್ದು, ಇದು ಬಿಜೆಪಿ ಮತ್ತು ಸರಕಾರದ ನಡುವೆ ಸದನದಲ್ಲಿ ವಾಕ್ಸಮರಕ್ಕೆ ಕಾರಣವಾಯಿತು.

ಡಿಜೆ ಬಳಕೆ ನಿಷೇಧ ಮಾಡಿ ಎಂದ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಸದಸ್ಯ ಚನ್ನಬಸಪ್ಪ ಡಿಜೆ ಮಾತ್ರ ಏಕೆ ನಿಷೇಧ ಹೇರಬೇಕು, ಸುಪ್ರೀಂ ಕೋರ್ಟ್ ಆದೇಶದಂತೆ ಆಝಾನ್ ಬ್ಯಾನ್ ಮಾಡ್ತೀರಾ ಎಂದು ತಿರುಗೇಟು ಕೊಟ್ಟರು.
ಇದಕ್ಕೆ ಸ್ಪೀಕರ್ ಖಾದರ್ ಅವರು ಸುಪ್ರೀಂ ಆದೇಶ ಶಬ್ದದ ಪ್ರಮಾಣಕ್ಕೆ ಸಂಬಂಧಿಸಿದ್ದು, ಒಂದು ವೇಳೆ ಸರಕಾರ ಆದೇಶ ನೀಡಿದರೆ ಪಾಲನೆ ಮಾಡಬೇಕು ಎಂದು ಹೇಳಿದರು.
ಬಳಿಕ ಡಿಜೆ ಬ್ಯಾನ್ ಮಾಡುವ ಸಂಬಂಧ ಸಚಿವರಾದ ಶಿವರಾಜ್ ತಂಗಡಿಗಿ ಹಾಗೂ ಪ್ರಿಯಾಂಕ್ ಖರ್ಗೆ ಸಹ ಪ್ರಸ್ತಾಪಿಸಿದ್ದು, ಬಿಜೆಪಿ ನಾಯಕರು ಸಹಕರಿಸಿದರೆ ಬ್ಯಾನ್ ಮಾಡುವುದಾಗಿ ಹೇಳಿದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಪರ ವಿರೋಧದ ಚರ್ಚೆಗೆ ಕಾರಣವಾಯ್ತು.

