Home » ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಸೌಜನ್ಯ ತಾಯಿ ಪಿಐಎಲ್‌, ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಸೌಜನ್ಯ ತಾಯಿ ಪಿಐಎಲ್‌, ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್‌ ನಿರ್ದೇಶನ

0 comments
Karnataka Highcourt

ಬೆಂಗಳೂರು ಮಾ.19: ಧರ್ಮಸ್ಥಳ ಗ್ರಾಮದಲ್ಲಿ 1990 ರಿಂದ 2021 ರ ನಡುವೆ ಸಂಭವಿಸಿದೆ ಎನ್ನಲಾಗಿರುವ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಕೈಗೊಂಡಿರುವ ಕ್ರಮಗಳ ಕುರಿತು ವರಸಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

2012 ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೀಡಾಗಿ ಕೊಲೆಯಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಕೆ ಮಾಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರಕಾರದ ಪರ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು ಅರ್ಜಿದಾರರು ಪ್ರಸ್ತಾಪ ಮಾಡಿರುವ ಪ್ರಕರಣಗಳು 2002 ರಲ್ಲಿ ನಡೆದಿದೆ. 74 ಪ್ರಕರಣಗಳಿಗೆ ಸಂಬಂಧಪಟ್ಟಮತೆ ತನಿಖೆ ಮಾಡಲಾಗಿದ್ದು, ಅಸ್ವಾಭಾವಿಕ ಸಾವು ಪ್ರಕರಣ (ಯುಡಿಆರ್‌) ದಾಖಲು ಮಾಡಲಾಗಿದೆ. ಸದ್ಯ ರಚನೆ ಮಾಡಲಾಗಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣಗಳನ್ನು ವರ್ಗಾಯಿಸುವಂತದ್ದು ಇಲ್ಲ ಎಂದು ಹೇಳಿದರು.

ಅಲ್ಲದೆ ಯುಡಿಆರ್‌ಗೆ ಸಂಬಂಧಪಟ್ಟಂತೆ ಯಾವುದಾದರೂ ದಾಖಲೆ ಸಲ್ಲಿಕೆ ಮಾಡಿದರೆ, ಅಥವಾ ದೂರನ್ನು ದಾಖಲು ಮಾಡಿದರೆ ತನಿಖೆಗೆ ಒಳಪಡಿಸಲಾಗುವುದು. ಅರ್ಜಿದಾರೆಯ ಸಹೋದರರನ್ನು ಧರ್ಮಸ್ಥಳ ಸಾಮೂಹಿಕ ದಹನ ಪ್ರಕರಣದಲ್ಲಿ ತನಿಖೆ ಮಾಡಲಾಗಿತ್ತು. ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲಾಗುವುದು. 2002 ರ ಮೇ.6 ರಂದು ಸಿಕ್ಕ ಬಾಲಕಿಯ ಶವಕ್ಕೆ ಸಂಬಂಧಪಟ್ಟಂತೆ ಯುಡಿಆರ್‌ ದಾಖಲು ಮಾಡಿ, ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಶವ ಸಂಸ್ಕಾರ ನಡೆಸಿರುವುದು, ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿರುವುದು, ಅಂತಿಮ ವರದಿ ವೈದ್ಯರ ಅಭಿಪ್ರಾಯ ಎಲ್ಲ ಇದೆ ಎಂದು ವಿವರಿಸಿದರು.

banner

ಅರ್ಜಿದಾರರ ಪರ ವಕೀಲ ಎಸ್‌ ಬಾಲನ್‌, ಅಸಹಜವಾಗಿ ಸಾವಿಗೀಡಾಗಿರುವ 74 ಪ್ರಕರಣಗಳಲ್ಲಿ ಪಂಚನಾಮೆ ಪ್ರಕ್ರಿಯೆ ನಡೆಸಲಾಗಿಲ್ಲ. ಸಾವನ್ನಪಿರುವವರ ಪಟ್ಟಿ ಇಡಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿಲ್ಲ. ಪ್ರಕ್ರಿಯೆ ಪಾಲಿಸದೇ ಶವಗಳ ಸಂಸ್ಕಾರ ಮಾಡಲಾಗಿದೆ. ಶವಗಳ ಸಂಸ್ಕಾರಕ್ಕೆ ಕುರಿತಂತೆ ಪಂಚಾಯಿತಿಗೆ ಪೊಲೀಸರು ಶಿಫಾರಸ್ಸು ಮಾಡಿದ್ದಾರೆ. ಶವ ಸಂಸ್ಕಾರ ಆಗಿದೆಯೇ? ಸುಟ್ಟಿದ್ದಾರೆಯೇ ಇವುಗಳ ಕುರಿತು ಮಾಹಿತಿ ಇಲ್ಲ. ಹಲವು ಪ್ರಕರಣಗಳ್ಲಿ ಮಹಿಳೆಯರು ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದು ನಾಪತ್ತೆಯಾಗಿದ್ದಾರೆ. ಆದರೆ ಈ ಪ್ರಕರಣದಲ್ಲಿ ತನಿಖೆ ಮಾಡಲಾಗಿಲ್ಲ. ಎಫ್‌ಐಆರ್‌ ನ್ನು ದಾಖಲು ಮಾಡಿ ತನಿಖೆ ನಡೆಸಿಲ್ಲ. 74 ಎಫ್‌ಐಆರ್‌ ದಾಖಲು ಮಾಡಿ, ತನಿಖೆ ನಡೆಸಬೇಕು. ಈ ಕುರಿತು ಸರಕಾರಕ್ಕೆ ಆದೇಶಿಸಬೇಕು ಎಂದು ನಮ್ಮ ಮನವಿಯಾಗಿದೆ ಎಂದು ಹೇಳಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು, 74 ಪ್ರಕರಣಗಳಿಗೆ ಕುರಿತಂತೆ ನಡೆಸಿರುವ ತನಿಖೆಯ ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಜು.7 ಕ್ಕೆ ಮುಂದೂಡಿದೆ.

You may also like