By Election : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ.

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ ಏಪ್ರಿಲ್ ಒಂಬತ್ತರಂದು ಉಪಚುನಾವಣೆ ನಡೆಯುತ್ತಿದೆ. ಎರಡು ವಿಧಾನಸಭಾ ಉಪಚುನಾವಣೆಗೆ ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಯುಗಾದಿಯ ದಿನದಂದು, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯ ಘೋಷಣೆಯಾಗಿದೆ. ಬಾಗಲಕೋಟೆಯಿಂದ ವೀರಭದ್ರಯ್ಯ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
