ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಮಾ.21ರಂದು ಬೇಸಿಗೆ ಶಿಬಿರ ಉದ್ಘಾಟನೆಗೊಂಡಿತು.

ಉಜಿರೆಯ ಎಸ್.ಡಿ.ಎಂ. ಕಲಾ ಕೇಂದ್ರದ ತರಬೇತುದಾರ ಯಶವಂತ ಬೆಳ್ತಂಗಡಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಬಿರದ ಮಹತ್ವ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರೀ ಜೈನ್, ವಿದ್ಯಾರ್ಥಿಗಳಿಗೆ ಶಿಬಿರದಲ್ಲಿ ತೊಡಗಿಸಿಕೊಳ್ಳುವಿಕೆ ಕುರಿತು ತಿಳಿಸಿದರು.
ಶಿಕ್ಷಕಿಯರಾದ ದಿವ್ಯ ಸ್ವಾಗತಿಸಿ, ತುಷಾರ ವಂದಿಸಿ, ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.
ದೈಹಿಕ ಶಿಕ್ಷಣ ಶಿಕ್ಷಕಿ ದೀಪ ಸುವರ್ಣ ಹಾಗೂ ಚಿತ್ರಕಲಾ ಶಿಕ್ಷಕ ಶಶಾಂಕ್ ಶಿಬಿರ ಸಂಯೋಜಿಸಿದರು. ಶಿಬಿರದಲ್ಲಿ, ಎಸ್.ಡಿ.ಎಂ. ಕಲಾ ಕೇಂದ್ರದ ತರಬೇತುದಾರ ಯಶವಂತ ಬೆಳ್ತಂಗಡಿ ಮತ್ತು ವಿದ್ಯಾರ್ಥಿಗಳು ನಟನಾ ಕೌಶಲ್ಯ ಕುರಿತು ಹಾಗೂ ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಶಿಕ್ಷಕ ಜಯರಾಮ್ ಪಿ.ಎಸ್., ಮುಖವಾಡ ತಯಾರಿ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

