Home » ಧಾರವಾಡ: ಮಾಜಿ ಶಾಸಕರ ಮಗನ ಸಾವಿಗೆ ಬಿಗ್‌ ಟ್ವಿಸ್ಟ್‌

ಧಾರವಾಡ: ಮಾಜಿ ಶಾಸಕರ ಮಗನ ಸಾವಿಗೆ ಬಿಗ್‌ ಟ್ವಿಸ್ಟ್‌

0 comments

ಧಾರವಾಡ: ಮಾಜಿ ಶಾಸಕನ ಪುತ್ರನ ಹತ್ಯೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್‌ವೊಂದು ದೊರಕಿದ್ದು, ಇದೊಂದು ಪೂರ್ವನಿಯೋಜಿತ ಕೊಲೆ ಎನ್ನುವ ಶಂಕೆ ವ್ಯಕ್ತವಾಗಿರುವ ಕುರಿತು ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್‌ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವ ಧಾರವಡ ತಾಲೂಕಿನ ರಾಮಾಪುರ ಅರಣ್ಯ ಪ್ರದೇಶದಲ್ಲಿ ಕಾರಿನೊಳಗೆ ಸುಟ್ಟ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು. ಮೂವರು ಆರೋಪಿಗಳನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಬಂಧನ ಮಾಡಿದ್ದಾರೆ.

ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ಮೃತನಿಗಿದ್ದ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎನ್ನಲಾಗಿದೆ. ಮಹಿಳೆಯ ಜೊತೆ ಅಕ್ರಮ ಸಂಬಂಧವಿದ್ದ ರಾಜು ಬೋಳಶೆಟ್ಟಿ, ದೈಹಿಕ ಸಂಪರ್ಕಕ್ಕೆಂದು ಬಂದಾಗ ಆಕೆಗೆ ಹಣ ನೀಡುತ್ತಿದ್ದ. ಸಾಲದ ರೂಪದಲ್ಲಿಯೇ ಮಹಿಳೆಗೆ ಹಣ ನೀಡುತ್ತಿದ್ದ ರಾಜು, ಎರಡು ಲಕ್ಷಕ್ಕೂ ಹೆಚ್ಚು ಹಣ ಕೊಟ್ಟಿದ್ದ. ಈ ವಿಚಾರಕ್ಕೆ ಮಹಿಳೆ ಮತ್ತು ರಾಜು ನಡುವೆ ಮನಸ್ತಾಪ ಆಗಿತ್ತು. ನಿನ್ನೆಯೂ ಆತ ದೈಹಿಕ ಸಂಪರ್ಕಕ್ಕೆ ಹೊಲಕ್ಕೆ ಮಹಿಳೆಯನ್ನು ಕರೆದಿದ್ದ. ಇದೇ ವೇಳೆ ಮಹಿಳೆ, ಆಕೆಯ ಮಗ ಹಾಗೂ ಆಕೆಯ ಪ್ರಿಯಕರ ಸೇರಿ ಈ ಕೃತ್ಯವೆಸಗಿದ್ದಾರೆ ಎಂದು ವರದಿಯಾಗಿದೆ.

ಶವವನ್ನು ರಾಜು ಬೋಳಶೆಟ್ಟಿಯ ಕಾರಿನಲ್ಲಿಯೇ ಅರಣ್ಯಕ್ಕೆ ಕರೆದು ತಂದ ಈ ಮೂವರು, ಹಿಂದಿನ ಸೀಟಿನಲ್ಲಿ ಶವವಿಟ್ಟು, ತಾವು ತಂದಿದ್ದ 10 ಲೀ. ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ಹೇಳಲಾಗಿದೆ. ನಂತರ ಮೂವರು ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ತನಿಖೆಯನ್ನು ಕೂಡಲೇ ಮಾಡಿದ್ದು, ಕೆಲವೇ ಘಂಟೆಗಳಲ್ಲಿ ಮೂವರನ್ನೂ ಬಂಧನ ಮಾಡಿದ್ದಾರೆ.

You may also like