Home » ಮತ್ತೊಂದು ಭೀಕರ ಅಗ್ನಿ ದುರಂತ: 10 ಜನ ಸಜೀವದಹನ

ಮತ್ತೊಂದು ಭೀಕರ ಅಗ್ನಿ ದುರಂತ: 10 ಜನ ಸಜೀವದಹನ

0 comments

ಆಂಧ್ರಪ್ರದೇಶದಲ್ಲಿ ಮಾರ್ಕಪುರಂ ಜಿಲ್ಲೆಯಲ್ಲಿ ಟಿಪ್ಪರ್‌ ಟ್ರಕ್‌ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬಸ್‌ ಬೆಂಕಿಗೆ ಆಹುತಿಯಾಗಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬಸ್‌ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದವರನ್ನು ರಕ್ಷಣೆ ಮಾಡಲಾಗಿದ್ದು, 18 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಕುರಿತು ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನಿಂದ ಪಾಮೂರ್‌ಗೆ ಖಾಸಗಿ ಟ್ರಾವೆಲ್‌ ಬಸ್‌ ಮತ್ತು ಚಿಮಕುರ್ತಿಯಿಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್‌ ಮುಖಾಮುಖಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿದೆ. ಒಟ್ಟು 40 ಪ್ರಯಾಣಿಕರು ಇದ್ದರು ಎಂದು ಅಂದಾಜಿಸಲಾಗಿದೆ. ಅವರಲ್ಲಿ 10 ಮಂದಿ ಸುಟ್ಟುಕರಕಲಾಗಿದ್ದಾರೆ. 18 ಜನರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದರು. ಆದರೆ ವಾಹನಗಳು ನಿಯಂತ್ರಣಕ್ಕೆ ಬರುವ ಮೊದಲೇ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕಣಿಗಿರಿ ಮತ್ತು ಪಾಮೂರ್‌ ಪ್ರದೇಶದ ನಿವಾಸಿಗಳು ಎಂದು ತಿಳಿದು ಬಂದಿದೆ.

 

banner

You may also like