ಮಾಣಿ: ತೊಕ್ಕೊಟ್ಟು ಬಳಿ ಶುಕ್ರವಾರ ಮುಂಜಾನೆ ರೌಡಿಶೀಟರ್ ಬಶೀರ್ ಯಾನೆ ಟ್ಯಾಬ್ಲೆಟ್ ಬಶೀರ್ರನ್ನು ಬರ್ಬರವಾಗಿ ಕೊಂದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಲಭ್ಯವಾಗಿರುವ ಕುರಿತು ವರದಿಯಾಗಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ಕೃತ್ಯಕ್ಕೆ ಬಳಸಲಾಗಿದ್ದ ಕಾರು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶುಕ್ರವಾರ ಮುಂಜಾನೆ ರೌಡಿಶೀಟರ್ ಬಶೀರ್ಯನೆ ಟ್ಯಾಬ್ಲೆಟ್ ಬಶೀರ್ ಎಂದಿನಂತೆ ಬೈಕಿನಲ್ಲಿ ತನ್ನ ಮೀನು ಮಾರಾಟದ ಸೆಂಟರ್ ಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡ ಬೈಕಿಗೆ ಹಿಂಬದಿಂದ ಡಿಕ್ಕಿ ಹೊಡೆದು ನೆಲಕ್ಕುರುಳಿಸಿ ತಲವಾರಿನಿಂದ ಭೀಕರವಾಗಿ ಕಡಿದು ಕೊಂದು ಕಾರಿನಲ್ಲಿ ಪರಾರಿಯಾಗಿತ್ತು.
ಮಾಣಿ ಸಮೀಪದ ಬುಡೋಳಿಯ ರಾಷ್ಟ್ರೀಯ ಹೆದ್ದಾರಿಯ ಬಳಿ ಕಾರೊಂದು ಶಂಕಾಸ್ಪದ ರೀತಿಯಲ್ಲಿ ಇರುವ ಕುರಿತು ಮಾಹಿತಿ ಲಭಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ವಿಟ್ಲ ಠಾಣಾ ಎಸ್ ಐ ಪ್ರಕಾಶ್ ದೇವಾಡಿಗ ಕಾರನ್ನು ವಶಪಡಿಸಿಕೊಂಡಿದ್ದಾರೆ.
