Home » ಮಂಗಳೂರು: ಐಆರ್‌ಸಿಟಿಸಿ ವಿಶೇಷ ಟೂರ್‌ ಪ್ಯಾಕೇಜ್‌

ಮಂಗಳೂರು: ಐಆರ್‌ಸಿಟಿಸಿ ವಿಶೇಷ ಟೂರ್‌ ಪ್ಯಾಕೇಜ್‌

0 comments
Indian Railway

ಮಂಗಳೂರು: ಮಾ.28: ಭಾರತೀಯ ರೈಲ್ವೇ ಕ್ಯಾಟರಿಂಗ್‌ ಆಂಡ್‌ ಟೂರಿಸಂ ಕಾರ್ಪೋರೇಷನ್‌ ಲಿಮಿಟೆಡ್‌ (ಐಆರ್‌ಸಿಟಿಸಿ) ವತಿಯಿಂದ ದಿವ್ಯ ದ್ವಾರಕಾ ಸೋಮನಾಥ ಯಾತ್ರೆ ಎಂಬ ವಿಶೇಷ ಪ್ರವಾಸಿ ರೈಲು ಯಾತ್ರೆ ಹಾಗೂ ಶಿರಡಿಗೆ ವಿಶೇಷ ವಿಮಾನ ಯಾತ್ರೆಯನ್ನು ಆಯೋಜನೆ ಮಾಡಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಐಆರ್‌ಸಿಟಿಸಿಯ ಜಂಟಿ ಜನರಲ್‌ ಮ್ಯಾನೇಜರ್‌ ಸ್ಯಾಮ್‌ ಜೋಸೆಫ್‌ ಪಿ ಮಾತನಾಡಿ, ವಿಶೇಷ ರೈಲು ಯಾತ್ರೆಯು ಮೇ.10 ರಂದು ಮಂಗಳೂರು ಮೂಲಕ ಹೊರಡಲಿದೆ ಎಂದು ಹೇಳಿದರು.

10 ದಿನಗಳ ತೀರ್ಥ ಯಾತ್ರೆಯಲ್ಲಿ ಗುಜರಾತ್‌ನ ಪ್ರಮುಖ ಆಧ್ಯಾತ್ಮಿಕ ಸ್ಥಳಗಳು ಹಾಗೂ ಗೋವಾದ ಸುಂದರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲಾಗುವುದು. ದ್ವಾರಕಾದಲ್ಲಿ ಜ್ಯೋತಿರ್ಲಿಂಗ, ಬೆಟ್‌ ದ್ವಾರಕಾ, ದ್ವಾರಕಾಧೀಶ ದೇವಾಲಯ ಮತ್ತು ರುಕ್ಮಿಣಿ ದೇವಾಲಯಗಳಿಗೆ ಭೇಟಿ, ಸೋಮನಾಥ ಜ್ಯೋತಿರ್ಲಿಂಗ ಮತ್ತು ಭಲ್ಕಾ ತೀರ್ಥ, ನಿಷ್ಕಳಂಕ ಮಹಾದೇವ ದೇವಾಲಯ ಮತ್ತು ಗಾಂಧಿ ಸ್ಮೃತಿ, ಗೋವಾದಲ್ಲಿ ಐತಿಹಾಸಿಕ ಅಗುವಾಡಾ ಕೋಟೆ, ಬೊಮ್‌ ಜೀಸಸ್‌ ಬೆಸಿಲಿಕಾ ಮತ್ತು ಕಲಾಂಗುಟೆ ಮತ್ತು ಕೋಲ್ವಾ ಬೀಚ್‌ಗಳಿಗೆ ಭೇಟಿ ವ್ಯವಸ್ಥೆ ಇದೆ. ಪ್ರಯಾಣಿಕರು ಮಂಗಳೂರು ಮತ್ತು ಉಡುಪಿ ಮೂಲಕ ರೈಲಿಗೆ ಏರಬಹುದು.

ಪ್ರಯಾಣಿಕರಿಗೆ ತಲಾ 28,760 ರೂ. ಪ್ಯಾಕೇಜ್‌ ದರವಿದೆ. 3 ಎಸಿ ರೈಲು ಪ್ರಯಾಣ, ಎಸಿ ಹೋಟೆಲ್‌ ವಸ್ತಿ, ಎಸಿ ರಸ್ತೆ ಸಾರಿಗೆ, ದಿನಕ್ಕೆ ಮೂರು ಸಸ್ಯಾಹಾರಿ ಊಟ, ವೃತ್ತಿಪರ ಟೂರ್‌ ಎಸ್ಕಾರ್ಟ್‌ಗಳು, ಸುರಕ್ಷತಾ ಸಿಬ್ಬಂದಿ ಮತ್ತು ಪ್ರಯಾಣ ವಿಮೆ ಒಳಗೊಂಡಿದೆ. ಐಆರ್‌ಸಿಟಿಸಿಯ ಅಧಿಕೃತ ಪೋರ್ಟಲ್‌ನನ್ನು ಬುಕ್ಕಿಂಗ್‌ಗೆ ಸಂಪರ್ಕಿಸಲು ಹೇಳಲಾಗಿದೆ.

banner

ಇದೇ ವೇಳೆ ಶಿರಡಿ ವಿಮಾನ ಪ್ಯಾಕೇಜ್‌ನಡಿ ಶನಿ ಶಿಂಗಣಾಪುರ ದೇವಾಲಯ, ಗೃಷ್ಣೇಶ್ವರ ಜ್ಯೋತಿರ್ಲಿಂಗ ದೇವಾಲಯ, ತ್ರ್ಯಂಬಕೇಶ್ವರ ಶಿವ ದೇವಾಲಯ, ಪಂಚವಟಿ ಮತ್ತು ಎಲ್ಲೋರಾ ಗುಹೆಗಳನ್ನು ಒಳಗೊಂಡ ಯಾತ್ರೆ ಇರಲಿದೆ. ಏ. 22ರಿಂದ ಏ. 26ರ ವರೆಗಿನ ಪ್ಯಾಕೇಜ್‌ ಬೆಲೆ ತಲಾ ಒಬ್ಬರಿಗೆ 28,050 ರು. ಆಗುತ್ತದೆ. ಪ್ಯಾಕೇಜ್‌ನಲ್ಲಿ ವಿಮಾನ ಟಿಕೆಟ್‌, ಊಟ ಸಹಿತ ವಸತಿ, ಸ್ಥಳೀಯ ಸಾರಿಗೆ, ಟೂರ್‌ ಕೋ ಅರ್ಡಿನೇಟರ್‌ ಸೇವೆ ಮತ್ತು ಪ್ರಯಾಣ ವಿಮೆ ಒಳಗೊಂಡಿರುತ್ತದೆ ಎಂದು ಅವರು ವಿವರ ನೀಡಿದರು.

You may also like