Home » ಕೊಡಗು ಎಎಸ್’ಐ ಜೋಷಿ ಕುಟ್ಟಪ್ಪ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್’ರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಕೊಡಗು ಎಎಸ್’ಐ ಜೋಷಿ ಕುಟ್ಟಪ್ಪ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್’ರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

0 comments

ಮಡಿಕೇರಿ: ಗೋಣಿಕೊಪ್ಪಲು ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್.ಮುಧೋಳ್ ಅವರಿಗೆ 2025ನೇ ಸಾಲಿಗೆ ಮುಖ್ಯ ಮಂತ್ರಿಗಳ ಚಿನ್ನದ ಪದಕ ಲಭಿಸಿದೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ನಡೆಯುವ ಪದಕ ಪ್ರದಾನ ಸಮಾರಂಭದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಶಿವರಾಜ್ ಆರ್. ಮುಧೋಳ್ ಅವರು ಮುಖ್ಯ ಮಂತ್ರಿ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ.

ಹಾಗೆಯೇ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ನಿಸ್ತಂತು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಂ) ಮಡಿಕೇರಿಯಲ್ಲಿ ASI ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಜೋಷಿ ಕುಟ್ಟಪ್ಪ ಅವರು 20225 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

You may also like