Home » ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ ತಪ್ಪೊಪ್ಪಿಗೆ

ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಆರೋಪಿ ಶಾರೀಕ್‌ ತಪ್ಪೊಪ್ಪಿಗೆ

0 comments
Cooker Bomb Blast

ಮಂಗಳೂರು: ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬೆಳವಣಿಗೆ ಕಂಡು ಬಂದಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಮೊಹಮ್ಮದ್‌ ಶಾರೀಕ್‌ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕಾರ ಮಾಡಿದೆ.

ನವೆಂಬರ್‌ 19,2022 ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಫ್ರೆಶರ್‌ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ. ಟೈಮರ್‌ ದೋಷದಿಂದ ಸಂಭವಿಸಿದ ಈ ಸ್ಫೋಟದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ. ನಂತರ ಶಂಕಿತ ಉಗ್ರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ಎನ್‌ಐಎ ಅಧಿಕಾರಿಗಳು ಆತನ ಬಂಧನ ಮಾಡಿದ್ದರು.

ಎಪ್ರಿಲ್‌ 20,2024 ರಂದು ಪ್ರಕರಣದ ಆರೋಪಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯವು ಪ್ರಶ್ನೆ ಮಾಡಿದಾಗ ಶಾರೀಕ್‌ ತಾನು ನಿರಪರಾಧಿ ಎಂದು ಹೇಳಿದ್ದ. ಆದರೆ 2025 ರ ಡಿಸೆಂಬರ್‌ನಲ್ಲಿ ಕ್ರಿಮಿನಲ್‌ ಪ್ರೊಸಿಜರ್‌ ಕೋಡ್‌ ಸೆಕ್ಷನ್‌ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿ ತನ್ನ ನಿಲುವು ಬದಲಿಸಿದ್ದ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚ್‌ 26 ರಂದು ನ್ಯಾಯಾಲಯವು ಈ ಅರ್ಜಿಯನ್ನು ಅಂಗೀಕಾರ ಮಾಡಿರುವ ಕುರಿತು ವರದಿಯಾಗಿದೆ.

ಅರ್ಜಿಯಲ್ಲಿ ಶಾರೀಕ್‌, ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿರುವ ಕುರಿತು ವರದಿಯಾಗಿದೆ.

banner

You may also like