Home » ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಿರಿ ಸಂಸ್ಥೆಗೆ ಭೇಟಿ

ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಿರಿ ಸಂಸ್ಥೆಗೆ ಭೇಟಿ

0 comments

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ ನಡೆಯುತ್ತಿದ್ದು, ಶಿಬಿರದ ಭಾಗವಾಗಿ ಮಾ.27ರಂದು ಹೊರಸಂಚಾರ ಪ್ರಯುಕ್ತ ವಿದ್ಯಾರ್ಥಿಗಳು ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಭೇಟಿ ನೀಡಿದರು.

ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ದನ್, ಸಂಸ್ಥೆಯ ಉತ್ಪನ್ನಗಳ ಬಗ್ಗೆ ವಿಡಿಯೋ ಪ್ರದರ್ಶನದೊಂದಿಗೆ ವಿವರಿಸಿದರು. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮುಟ್ಟುವಂತೆ ಶ್ರಮಿಸಬೇಕು ಎಂದರು.

ಸಿದ್ಧ ಉಡುಪು, ತಿಂಡಿ ತಯಾರಿ ಘಟಕ, ಫಿನೇಲ್ ತಯಾರಿ ಘಟಕ ಬಗ್ಗೆ ಪ್ರಧಾನ ವ್ಯವಸ್ಥಾಪಕ ಜೀವನ್ ವಿವರಿಸಿದರು.

ಶಿಬಿರ ಸಂಯೋಜಕರಾದ ದೀಪಾ ಸವರ್ಣ, ಶಶಾಂಕ್, ವಿಕಾಸ್ ಆರಿಗ, ಆಂಗ್ಲ ಭಾಷಾ ಶಿಕ್ಷಕ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

banner

You may also like