Dharawada: ಪೆಟ್ರೋಲ್ ಅಭಾವದ ವದಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅನೇಕರು ಟ್ಯಾಂಕ್, ನೀರಿನ ಕ್ಯಾನ್ ತಂದು ಪೆಟ್ರೋಲ್ ಡೀಸೆಲ್ ಗಳನ್ನು ತುಂಬಿಸಿ ಮನೆಯಲ್ಲಿ ಇಡುತ್ತಿದ್ದಾರೆ. ಹೀಗೆ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಪೆಟ್ರೋಲ್ ಕ್ಯಾನ್ ಸ್ಫೋಟಗೊಂಡು, ಗೃಹಿಣಿಯೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ತಡಕೋಡ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸೋಮವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಪೂರ್ಣಿಮಾ ಕಲ್ಲಪ್ಪ ಹಾದಿಮನಿ (32) ಎಂಬ ಗೃಹಿಣಿಯೇ ತೀವ್ರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹ ಸುಟ್ಟಿರುವ ಕಾರಣ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಪೂರ್ಣಿಮಾ ಅವರ ದೇಹದ ಶೇ. 80 ರಷ್ಟು ಭಾಗ ಸುಟ್ಟು ಹೋಗಿದೆ. ಮದುವೆ ಸಮಾರಂಭಗಳಲ್ಲಿ ರಥ ಓಡಿಸುವ ಸಲುವಾಗಿ ಈ ಕುಟುಂಬವು ಪೆಟ್ರೋಲ್ ಸಂಗ್ರಹಿಸಿ ಫ್ರಿಡ್ಜ್ ಬಳಿ ಇಟ್ಟಿತ್ತು. ಪೂರ್ಣಿಮಾ ಅವರು ಅಡುಗೆ ಕೆಲಸದಲ್ಲಿದ್ದಾಗ ಆಕಸ್ಮಿಕವಾಗಿ ಕ್ಯಾನ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ಜ್ವಾಲೆ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಯ ನಡುವೆ ಸಿಲುಕಿದ್ದ ಅತ್ತಿಗೆಯನ್ನು ಕಾಪಾಡಲು ಮೈದುನ ಯಲ್ಲಪ್ಪ ಅವರು ಪ್ರಾಣದ ಹಂಗು ತೊರೆದು ಮುಂದಾಗಿದ್ದಾರೆ. ಈ ವೇಳೆ ಅವನಿಗೂ ಗಾಯಗಳಾಗಿವೆ. ಆದರೆ ಮಹಿಳೆಯ ಸ್ಥಿತಿ ಮಾತ್ರ ಗಂಭೀರವಾಗಿದೆ.
ಈ ವೇಳೆ ಮನೆಯ ಸದಸ್ಯರ ಹೊರಗಡೆ ಕುಳಿತಿದ್ದರಿಂದ ಪಾರಾಗಿದ್ದಾರೆ. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಮದುವೆ ಕಾರ್ಯಕ್ರಮಗಳಿಗೆ ರಥ ಒಡಿಸೊದಕ್ಕೆ ಇವರು ಪೆಟ್ರೋಲ್ ಸ್ಟಾಕ್ ಮಾಡಿದ್ದರು ಎಂದು ತಿಳಿದು ಬಂದಿದೆ. ಸದ್ಯ ಗರಗ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

