Home » Byndoor: ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

Byndoor: ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

0 comments

Byndoor: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ  ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರದಲ್ಲಿ ನಡೆಸಲಾಯಿತು. 

ಕಾರ್ಯಕ್ರಮದಲ್ಲಿ  ಬೈಂದೂರು ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಉದ್ಘಾಟಿಸಿ ಭೀಮ ಗೋಲ್ಡ್ ಸಂಸ್ಥೆಯ CSR ನಿಂದ ನಮ್ಮ ಸೇವಾಧಾಮ ಸಂಸ್ಥೆಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಟ್ಟಿದಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಪುನಶ್ಚೇತನವನ್ನು ಪಡೆದುಕೊಳ್ಳುತ್ತಿರುವ ದಿವ್ಯಾಂಗರು  ಸಕ್ಷಮವಾಗಿ ಉಜ್ವಲ ಬದುಕನ್ನು ಕಾಣಲಿ ಎಂದು ಶುಭಹಾರೈಸಿದರು. 

ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ್ ಶೆಟ್ಟಿ , ಗೋಪಾಲ ವರ್ಸೆ, ಶ್ರೀಮತಿ ಭಾನುಮತಿ, ಶ್ರೀ ರವಿಚಂದ್ರ, ಶ್ರೀಮತಿ ಮಂಜುಳ  ವಿಷ್ಣುಪ್ರಸಾಧ್, ಸೇವಾಭಾರತಿಯ ಕಾರ್ಯದರ್ಶಿ ಶ್ರೀ ವಿಷ್ಣುಪ್ರಸಾದ್ ತೆಂಕಿಲ್ಲಾಯ, ಗ್ರಾಮಸ್ಥರು, ಪ್ರಮುಖರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

banner

You may also like