Home » Accident : ಲಾರಿಗೆ ಕಾರು ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Accident : ಲಾರಿಗೆ ಕಾರು ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

0 comments

Accident : ಕೆಲವು ತಿಂಗಳ ಹಿಂದಷ್ಟೇ ವಿವಾಹವಾಗುತ್ತಾ ನವ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿಯಾಗಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಸಂಭವಿಸಿದೆ.

ರಕ್ಷಿತಾ ರೆಡ್ಡಿ (23) ಹಾಗೂ ಪವನ್ ರೆಡ್ಡಿ (30) ಮೃತರು. ಪತಿ ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ರಕ್ಷಿತಾ ಹಾಗೂ ರಾಜಶೇಖರ್ ದಂಪತಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಇಂಜನಿಯರ್ ಆಗಿದ್ದು, ಕಳೆದ ನವೆಂಬರ್ ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರು ಇಬ್ಬರು ತಮ್ಮ ಸಂಬಂಧಿ ಪವನ್ ರೆಡ್ಡಿ ಜೊತೆ ಕಾರಿನಲ್ಲಿ ಅನಂತಪುರದ ಸ್ವಗ್ರಾಮ ಅವಳಗಿಗೆ ತೆರಳುತ್ತಿದ್ದರು. ಈ ವೇಳೆ ಮುಂದೆ ಸಾಗುತ್ತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. 

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ರಕ್ಷಿತಾ ರೆಡ್ಡಿ (23) ಹಾಗೂ ಅವರ ಸಂಬಂಧಿ ಪವನ್ ರೆಡ್ಡಿ (30) ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ರಕ್ಷಿತಾ ಅವರ ಪತಿ ರಾಜಶೇಖರ್ ರೆಡ್ಡಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

You may also like