Home » Kalaburagi : ಸರ್ಕಾರಿ ಶಾಲಾ ಶಿಕ್ಷಕಿಯ ಕೊಂದು ಸುಟ್ಟು ಹಾಕಿದ ಕೇಸ್ – ಇದು 57ರ ಶಿಕ್ಷಕಿ 27ರ ಯುವಕನ ಪ್ರೇಮ ಪ್ರಕರಣ

Kalaburagi : ಸರ್ಕಾರಿ ಶಾಲಾ ಶಿಕ್ಷಕಿಯ ಕೊಂದು ಸುಟ್ಟು ಹಾಕಿದ ಕೇಸ್ – ಇದು 57ರ ಶಿಕ್ಷಕಿ 27ರ ಯುವಕನ ಪ್ರೇಮ ಪ್ರಕರಣ

0 comments

Kalaburagi : ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಮಗನ ವಯಸ್ಸಿನ ಯುವಕನೊಂದಿಗೆ ಸಲ್ಲದ ಸಂಬಂಧ ಬೆಳೆಸಿದ್ದ ಕಾರಣಕ್ಕೆ 57 ವರ್ಷದ ಈ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಅದೇ ಯುವಕ ಹತ್ಯೆ ಮಾಡಿದ್ದಾನೆ.

ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್‌ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಜ್ಯೋತಿಯನ್ನು ಕೊಲೆಗೈದ ದುಷ್ಕರ್ಮಿಗಳು ರಸ್ತೆ ಪಕ್ಕದಲ್ಲಿ ಐದು ಲೀಟರ್ ಪೆಟ್ರೋಲ್ ಹಾಕಿ ಶವವನ್ನು ಸುಟ್ಟು ಹಾಕಿದ್ದರು. 

ಅಕ್ರಮ ಸಂಬಂಧವೇ ಕೊಲೆಗೆ ಕಾರಣ :

ಅವಿವಾಹಿತೆಯಾಗಿದ್ದ ಜ್ಯೋತಿ ಅವರು ಭಾಲ್ಕಿಯಲ್ಲಿ ವಾಸವಿದ್ದರು. ರಜೆ ದಿನಗಳಲ್ಲಿ ಕಲಬುರಗಿಯ ಆನಂದ ನಗರದಲ್ಲಿರುವ ತಾಯಿ ಮನೆಗೆ ಬರುತ್ತಿದ್ದರು. ಈ ವೇಳೆ ಅವರಿಗೆ ನೆರೆಯ ನಿವಾಸಿ ಅಮರ ಗುಡ್ಡಳ್ಳಿ (27) ಎಂಬಾತನ ಪರಿಚಯವಾಗಿತ್ತು. ಕಳೆದ ಐದು ವರ್ಷಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧವಿತ್ತು. 27ರ ಹರೆಯದ ಅಮರನಿಗೆ ಮದುವೆಯಾಗಿ ಹೆಂಡತಿ ಮಕ್ಕಳಿದ್ದರೂ, ಟೀಚರ್ ಜ್ಯೋತಿ ನೀಡುತ್ತಿದ್ದ ಹಣದ ಆಮಿಷಕ್ಕೆ ಬಿದ್ದು ಆಕೆಯೊಂದಿಗೆ ಸಂಬಂಧ ಮುಂದುವರಿಸಿದ್ದ. ಜ್ಯೋತಿ ನೀಡಿದ್ದ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣದಲ್ಲಿ ಅಮರ್ ಐಷಾರಾಮಿ ‘ಥಾರ್’ ಕಾರನ್ನು ಕೂಡ ಖರೀದಿಸಿದ್ದ. 

banner

ಇತ್ತೀಚಿನ ದಿನಗಳಲ್ಲಿ ಜ್ಯೋತಿ ಅವರು ತಾನು ನೀಡಿದ್ದ ಹಣವನ್ನು ಮರಳಿ ನೀಡುವಂತೆ ಅಮರನಿಗೆ ಒತ್ತಡ ಹೇರಲಾರಂಭಿಸಿದ್ದರು. ಇದರಿಂದ ಆಕ್ರೋಶಗೊಂಡ ಅಮರ್, ಜ್ಯೋತಿಯನ್ನು ಹಾದಿಯಿಂದ ತಪ್ಪಿಸಲು ಸಂಚು ರೂಪಿಸಿದ್ದಾನೆ. ಏಪ್ರಿಲ್ 3 ರಂದು ಜ್ಯೋತಿಯನ್ನು ತನ್ನ ಥಾರ್ ಕಾರಿನಲ್ಲಿ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಸೇರಿದಂತೆ ವಿವಿಧೆಡೆ ಸುತ್ತಾಡಿಸಿದ್ದಾನೆ. ರಾತ್ರಿ ವೇಳೆಗೆ ಕಲಮೂಡ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಮೊದಲೇ ಸಿದ್ಧಪಡಿಸಿಕೊಂಡಿದ್ದ ಹರಿತವಾದ ಆಯುಧದಿಂದ ಜ್ಯೋತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಸಾಕ್ಷ್ಯ ನಾಶಪಡಿಸಲು ಕಾರಿನ ಡಿಕ್ಕಿಯಲ್ಲಿ ತಂದಿದ್ದ ಪೆಟ್ರೋಲ್ ಸುರಿದು ಶವಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ. 

You may also like