ಮಂಗಳೂರು/ಉಡುಪಿ: ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಉಷ್ಣಾಂಶ ಮತ್ತು ಆರ್ದ್ರತೆಯಿಂದ ಕೂಡಿದ ವಾತಾವರಣವಿದ್ದು, ಭಾರತೀಯ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ.


ಎಪ್ರಿಲ್ 10 ರಿಂದ 12 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಬಿಸಿ ಗಾಳಿಯ ಜೊತೆಗೆ ಹವಾಮಾನದಲ್ಲಿ ತೇವಾಂಶವು ಹೆಚ್ಚಾಗಿರುವುದರಿಂದ ಸಾರ್ವಜನಿಕರು ಹೆಚ್ಚಿನ ಅಸ್ವಸ್ಥತೆಯನ್ನು ಅನುಭವಿಸಬಹುದು.
ನೀರು ಹೆಚ್ಚಾಗಿ ಕುಡಿಯಿರಿ: ಬಾಯಾರಿಕೆಯಲ್ಲದಿದ್ದರೂ ಪದೇ ಪದೇ ನೀರು, ಎಳನೀರು, ಮಜ್ಜಿಗೆಯನ್ನು ಸೇವಿಸಿ.
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ನೇರ ಬಿಸಿಲಿಗೆ ಹೋಗಬೇಡಿ
ಸಡಿಲ ಬಟ್ಟೆ, ತಿಳಿ ಬಣ್ಣದ ಹತ್ತಿ ಬಟ್ಟೆಗಳನ್ನು ಧರಿಸಿ, ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ.
ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರು ಬಿಸಿಲಿನಲ್ಲಿ ಓಡಾಡದಂತೆ ಹೆಚ್ಚಿನ ಕಾಳಜಿ ವಹಿಸಿ. ಕರಾವಳಿಯ ಈ ಭಾಗಗಳಲ್ಲಿ ತಾಪಮಾನ ಏರಿಕೆಯೊಂದಿಗೆ ಆರೋಗ್ಯದ ಮೇಲೆ ಪರಿಣಾಮ ಬೀರದಂತೆ ಜಾಗರೂಕರಾಗಿರಲು ಜಿಲ್ಲಾಡಳಿತ ವಿನಂತಿ ಮಾಡಿದೆ.

