5
ಬೆಳ್ತಂಗಡಿ: ತಾಲೂಕಿನ ಉಜಿರೆ ಗ್ರಾಮದ ಸದಾ ಕಾಲ ನೀರು ಬರುವ ನೀರಚಿಲುಮೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಏಪ್ರಿಲ್ 13ರಂದು ಬೆಳಕಿಗೆ ಬಂದಿದೆ.


ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಮೃತರ ಗುರುತು ಪತ್ತೆಹಚ್ಚಲು ಮತ್ತು ಸಾವಿನ ನಿಖರ ಕಾರಣ ತಿಳಿಯಲು ತನಿಖೆಯನ್ನು ಮುಂದುವರಿಸಿದ್ದಾರೆ.
