Home » Bengaluru : 14 ವರ್ಷದ ಮಗಳನ್ನ ಕೊಂದು ತಾಯಿ ಆತ್ಮಹತ್ಯೆ ಪ್ರಕರಣ – ಕೊನೆಗೂ ಕಾರಣ ಬಹಿರಂಗ !!

Bengaluru : 14 ವರ್ಷದ ಮಗಳನ್ನ ಕೊಂದು ತಾಯಿ ಆತ್ಮಹತ್ಯೆ ಪ್ರಕರಣ – ಕೊನೆಗೂ ಕಾರಣ ಬಹಿರಂಗ !!

0 comments

Bengaluru : ಬೆಂಗಳೂರಿನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಹೆತ್ತ ತಾಯಿಯೇ ತನ್ನ 17 ವರ್ಷದ ಮಗಳನ್ನು ಕೊಂದು ತಾನೂ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಈ ರೀತಿ ತಾಯಿ ಮಾಡಲು ಕಾರಣವೇನೆಂಬುದು ಬಯಲಾಗಿದೆ.

40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ನಗರದ ವೈಟ್‌ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ಈ ಕೃತ್ಯ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುವರ್ಣ ಅವರು ಮೊದಲು ತನ್ನ ಮಗಳು ಕಾರುಣ್ಯಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಮಗಳು ಮೃತಪಟ್ಟಿದ್ದಾಳೆ ಎಂದು ಖಚಿತಪಡಿಸಿಕೊಂಡ ಬಳಿಕ, ಅದೇ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ತಾವೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕವಾಗಿ ಕುಗ್ಗಿ ಸುವರ್ಣ ಆತ್ಮಹತ್ಯೆ!

ಮೃತ ಸುವರ್ಣ ಗಂಡ ಚಂದ್ರಶೇಖರ್​ಗೆ ಇತ್ತೀಚೆಗೆ ಹಾರ್ಟ್ ಟ್ರಾನ್ಸ್‌ಪ್ಲಾಂಟ್ ಆಗಿತ್ತು, ಖರ್ಚು ವೆಚ್ಚಕ್ಕೆ ಹಣಕಾಸು ಕೊರತೆ ಉಂಟಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮಾನಸಿಕವಾಗಿ ಕುಗ್ಗಿದ್ದ ಸುವರ್ಣ ಮಗಳನ್ನು ಕೊಂದು ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

banner

ಈ ಘಟನೆ ಬಗ್ಗೆ ಮೃತ ಸುವರ್ಣ ಅಕ್ಕ ಉಷಾ ಅವರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಹಣಕಾಸು ವಿಚಾರಕ್ಕೆ ಸುವರ್ಣ ಬೇಜಾರಾಗಿದ್ದಳು. ಹಣಕಾಸು ವಿಚಾರಕ್ಕೆ ಬೇಜಾರಾಗಿ ಖಿನ್ನತೆಗೆ ಒಳಗಾಗಿದ್ದಳು, ನಮ್ಮ ಮನೆ ಅತ್ತಿಬೆಲೆಗೆ ಫ್ರೀ ಟಿಕೆಟ್‌ನಲ್ಲಿ ಬರುತ್ತಿದ್ದಳು. ಹಣಕಾಸು ಬಗ್ಗೆ ನನಗೆ ಆಗಾಗ್ಗೆ ಹೇಳುತ್ತಿದ್ದಳು, ಇದೇ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದಿದ್ದಾರೆ.

You may also like