Bengaluru : ಬೆಂಗಳೂರಿನಲ್ಲಿ ದಾರುಣ ಘಟನೆ ಸಂಭವಿಸಿದ್ದು, ಹೆತ್ತ ತಾಯಿಯೇ ತನ್ನ 17 ವರ್ಷದ ಮಗಳನ್ನು ಕೊಂದು ತಾನೂ ಆತ್ಮ*ಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಈ ರೀತಿ ತಾಯಿ ಮಾಡಲು ಕಾರಣವೇನೆಂಬುದು ಬಯಲಾಗಿದೆ.


40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ನಗರದ ವೈಟ್ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ಈ ಕೃತ್ಯ ನಡೆದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುವರ್ಣ ಅವರು ಮೊದಲು ತನ್ನ ಮಗಳು ಕಾರುಣ್ಯಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಮಗಳು ಮೃತಪಟ್ಟಿದ್ದಾಳೆ ಎಂದು ಖಚಿತಪಡಿಸಿಕೊಂಡ ಬಳಿಕ, ಅದೇ ಕೋಣೆಯ ಫ್ಯಾನ್ಗೆ ನೇಣು ಬಿಗಿದುಕೊಂಡು ತಾವೂ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.
ಮಾನಸಿಕವಾಗಿ ಕುಗ್ಗಿ ಸುವರ್ಣ ಆತ್ಮಹತ್ಯೆ!
ಮೃತ ಸುವರ್ಣ ಗಂಡ ಚಂದ್ರಶೇಖರ್ಗೆ ಇತ್ತೀಚೆಗೆ ಹಾರ್ಟ್ ಟ್ರಾನ್ಸ್ಪ್ಲಾಂಟ್ ಆಗಿತ್ತು, ಖರ್ಚು ವೆಚ್ಚಕ್ಕೆ ಹಣಕಾಸು ಕೊರತೆ ಉಂಟಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮಾನಸಿಕವಾಗಿ ಕುಗ್ಗಿದ್ದ ಸುವರ್ಣ ಮಗಳನ್ನು ಕೊಂದು ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಘಟನೆ ಬಗ್ಗೆ ಮೃತ ಸುವರ್ಣ ಅಕ್ಕ ಉಷಾ ಅವರು ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಹಣಕಾಸು ವಿಚಾರಕ್ಕೆ ಸುವರ್ಣ ಬೇಜಾರಾಗಿದ್ದಳು. ಹಣಕಾಸು ವಿಚಾರಕ್ಕೆ ಬೇಜಾರಾಗಿ ಖಿನ್ನತೆಗೆ ಒಳಗಾಗಿದ್ದಳು, ನಮ್ಮ ಮನೆ ಅತ್ತಿಬೆಲೆಗೆ ಫ್ರೀ ಟಿಕೆಟ್ನಲ್ಲಿ ಬರುತ್ತಿದ್ದಳು. ಹಣಕಾಸು ಬಗ್ಗೆ ನನಗೆ ಆಗಾಗ್ಗೆ ಹೇಳುತ್ತಿದ್ದಳು, ಇದೇ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದಿದ್ದಾರೆ.

