Home » ಪುತ್ತೂರು: ಯಕ್ಷ ಕಲಾವಿದ ದಿನೇಶ್‌ ಕೊಡಪದವು ಪ್ರಕರಣ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಯಕ್ಷ ಕಲಾವಿದ ದಿನೇಶ್‌ ಕೊಡಪದವು ಪ್ರಕರಣ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

0 comments
Dharmasthala Soujanya

ಪುತ್ತೂರು: ಮಹಿಳೆಯೊಬ್ಬರಿಗೆ ಫೋನ್‌ನಲ್ಲಿ ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿ, ಬೆದರಿಕೆ ಹಾಕಿದ ಆರೋಪದಲ್ಲಿ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

ಖ್ಯಾತ ಕಲಾವಿದ ದಿನೇಶ್‌ ಕೊಡಪದವು ಅವರ ತಾಯಿ, ಬಂಟ್ವಾಳ ನಿವಾಸಿ ಲೀಲಾವತಿ (71) ಅವರು ಈ ಕುರಿತು ದೂರನ್ನು ನೀಡಿದ್ದಾರೆ.

ಮಹೇಶ್‌ ಶೆಟ್ಟಿ ತಿಮರೋಡಿ ಅವರು ಕರೆ ಮಾಡಿ, ಕೀಳುಮಟ್ಟದ ಶಬ್ದಗಳಿಂದ ನಿಂದನೆ ಮಾಡಿ ತೇಜೋವಧೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಮಹಿಳೆಯ ಗೌರವಕ್ಕೆ ಧಕ್ಕೆ ತರವು ರೀತಿಯಲ್ಲಿ ಮಾತನಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ.

ಸದ್ಯ ತಿಮರೋಡಿ ಅವರು ಅಸಭ್ಯವಾಗಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ವೃದ್ಧೆ ಲೀಲಾವತಿ ಅವರು ನೀಡಿದ ದೂರಿನ ಆಧಾರದಲ್ಲಿ ಎಪ್ರಿಲ್‌ 13 ರಂದು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

banner

You may also like