Home » ಮಂತ್ರಾಲಯ ರಾಯರ ದರ್ಶನಕ್ಕೆ ಹೊರಟ ಭಕ್ತರ ಬೊಲೊರೊ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ, ಎಂಟು ಮಂದಿ ಸಾವು

ಮಂತ್ರಾಲಯ ರಾಯರ ದರ್ಶನಕ್ಕೆ ಹೊರಟ ಭಕ್ತರ ಬೊಲೊರೊ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ, ಎಂಟು ಮಂದಿ ಸಾವು

0 comments

ರಾಯಚೂರು, ಎ.16: ಮಂತ್ರಾಲಯ ರಾಯರ ದರ್ಶನಕ್ಕೆಂದು ಹೊರಟಿದ್ದ ಚಿಕ್ಕಬಳ್ಳಾಪುರದ ಭಕ್ತರ ಬೊಲೆರೋ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿಯಾಗಿ ಎಂಟು ಮಂದಿ ಸಾವಿಗೀಡಾದ ಘಟನೆ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯ ಮಂತ್ರಾಲಯ ತಾಲೂಕಿನಲ್ಲಿ ಈ ಘಟನೆ ನಡೆದಿದೆ.

21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣ ಮಾಡುತ್ತಿದ್ದ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್‌ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್‌, ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲಿಯೇ ಮೃತಪಟ್ಟರೆ, ಇನ್ನಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

You may also like