Home » ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟ ಪ್ರಕಾಶ್‌ ರಾಜ್‌ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌?

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟ ಪ್ರಕಾಶ್‌ ರಾಜ್‌ ವಿರುದ್ಧ ಬಿತ್ತು ಕ್ರಿಮಿನಲ್‌ ಕೇಸ್‌?

0 comments
Prakash Raj

ಪ್ರಕಾಶ್‌ ರಾಜ್‌ ಅವರು ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್‌ ಕೇಸ್‌ ಹಾಕಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ವೇದಿಕೆಯೊಂದರಲ್ಲಿ ಮಾತನಾಡುತ್ತಿದ್ದ ಪ್ರಕಾಶ್‌ ರಾಜ್‌ ಅವರು, ರಾಮ ಉತ್ತರ ಭಾರತದವನು, ರಾವಣ ದಕ್ಷಿಣ ಭಾರತದ ಆದಿವಾಸಿ ಎಂದು ಹೇಳಿದ್ದರು. ರಾಮ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ನಡುವೆ ಕಿತ್ತಾಟ ಶುರುವಾಯಿತು ಎಂದು ಹೇಳಿ ಹೊಸ ಚರ್ಚೆಯೊಂದನ್ನು ಹುಟ್ಟು ಹಾಕಿದ್ದಾರೆ. ಈಗ ಪ್ರಕಾಶ್‌ ರಾಜ್‌ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿದೆ ಎಂದು ಹೇಳಲಾಗುತ್ತಿದೆ.

ಪ್ರಕಾಶ್‌ ರಾಜ್‌ ಹೇಳಿದ್ದೇನು?
ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬಂದು, ಬಂದಾಗ ಲಕ್ಷ್ಮಣನಿಗೆ ಹಸಿವಾಗುತ್ತದೆ. ಅಲ್ಲಿದ್ದ ಹಣ್ಣಿನ ತೋಟದಿಂದ ಹೋಗಿ ಹಣ್ಣನ್ನು ತಿನ್ನೋಣ ಎಂದು ಲಕ್ಷ್ಮಣ ಹೇಳುತ್ತಾನೆ. ಎಲ್ಲರೂ ಹಣ್ಣು ತಿನ್ನುತ್ತಾರೆ. ಆಗ ಅಲ್ಲಿಗೆ ಬರುವ ಶೂರ್ಪನಖ, ಅಣ್ಣ ರಾವಣ ಯಾರೋ ಹಣ್ಣನ್ನು ತಿನ್ನುತ್ತಿದ್ದಾರೆ ಎಂದು ಕೇಳುತ್ತಾರೆ. ಆಗ ರಾವಣ ಅವರಿಗೆ ಹಸಿವಾಗಿದೆ ತಿನ್ನಲಿ ಎನ್ನುತ್ತಾರೆ ಎಂದು ಹೇಳಿದ್ದಾರೆ.

ಆಗ ರಾವಣ ಹಣ ಕೇಳುತ್ತಾನೆ, ರಾಮ ಇಲ್ಲ ಎನ್ನುತ್ತಾನೆ. ಆಗ ರಾವಣ 20 ಪರ್ಸೆಂಟ್‌ ಡಿಸ್ಕೌಂಟ್‌ ಕೊಡ್ತೀನಿ ಎಂದು ಹೇಳುತ್ತಾರೆ. ಹಣವೇ ಇಲ್ಲ ಎಂದ ಮೇಲೆ ಡಿಸ್ಕೌಂಟ್‌ ಕೊಟ್ಟು ಏನು ಪ್ರಯೋಜನ? ಅದೇ ರೀತಿ ಹಿಂದಿ ಹೇರಿಕೆ ಮಾಡಬೇಡಿ, ಇಲ್ಲಿ ಬಂದು ನೀವು ಮಲಯಾಳಂ ಕಲಿಯಿರಿ. ನಾವು ಬೀಫ್‌ ಫೆಸ್ಟ್‌ ಮಾಡುತ್ತೇವೆ ಎಂದಿದ್ದಾರೆ ಪ್ರಕಾಶ್‌ ರಾಜ್‌. ಈ ವಿಷಯಕ್ಕೆ ಕುರಿತಂತೆ ಕೇಸ್‌ ದಾಖಲಾಗಿದೆ ಎಂದು ವರದಿಯಾಗಿದೆ.

banner

You may also like