Home » ಮಂಗಳೂರು: ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ; ಬೈಕ್‌ ಸವಾರನ ವಿರುದ್ಧ ಕೇಸು ದಾಖಲು

ಮಂಗಳೂರು: ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ; ಬೈಕ್‌ ಸವಾರನ ವಿರುದ್ಧ ಕೇಸು ದಾಖಲು

0 comments
Crime News Bangalore

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ 18ರಂದು ನಡೆದಿದೆ. ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬಂದಿ ಪ್ರವೀಣ್‌ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಪ್ರಿಲ್ 18 ರಂದು ಮಧ್ಯಾಹ್ನ 12:37ರ ಸುಮಾರಿಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯ ಹಲೇಷಾ, ಪ್ರವೀಣ್ ಮತ್ತು ಚಂಪಾ ಅವರು ನಂತೂರು ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದ ಸಮಯದಲ್ಲಿ ಈ ಘಟನೆ‌ ನಡೆದಿದೆ. ಈ ವೇಳೆ ಪದವು ಕಡೆಯಿಂದ ಬೈಕ್‌ನಲ್ಲಿ ಮಹಿಳೆಯೊಂದಿಗೆ ಬಂದ ಸವಾರ, ಬಿಕರ್ನಕಟ್ಟೆ ಕಡೆಗೆ ತೆರಳುವ ‘ಫ್ರೀ ಲೆಫ್ಟ್’ ರಸ್ತೆಯಲ್ಲಿ ವಾಹನವನ್ನು ಅಡ್ಡಲಾಗಿ ನಿಲ್ಲಿಸಿದ್ದ. ಇದರಿಂದ ಇತರ ವಾಹನಗಳಿಗೆ ಅಡಚಣೆಯಾಗುತ್ತಿರುವುದನ್ನು ಗಮನಿಸಿದ ಹಲೇಷಾ ಅವರು ಬೈಕನ್ನು ಮುಂದಕ್ಕೆ ಕೊಂಡು ಹೋಗುವಂತೆ ಸೂಚಿಸಿದರು.

ಇದರಿಂದ ಕೋಪಗೊಂಡ ಸವಾರ ಪೊಲೀಸರನ್ನು “ಬೇವರ್ಸಿ” “ನಾಯಿಗಳು” ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಪ್ರಶ್ನಿಸಿದ ಸಿಪಿಸಿ ಪ್ರವೀಣ್‌ ಅವರ ಮುಖಕ್ಕೆ ಹೊಡೆದು ಗಾಯಗೊಳಿಸಿದ್ದಾನೆ. ಅಲ್ಲದೆ, ಅವರ ಕೈಯಲ್ಲಿದ್ದ ಸುಮಾರು ₹28,000 ಮೌಲ್ಯದ ಮೊಬೈಲ್ ಕಿತ್ತುಕೊಂಡು ನೆಲಕ್ಕೆ ಎಸೆದು ಜಖಂಗೊಳಿಸಿದ್ದಾನೆ. ಜೊತೆಯಲ್ಲಿದ್ದ ಮಹಿಳೆ ಕೂಡ ಪೊಲೀಸರಿಗೆ ಚಪ್ಪಲಿಯಲ್ಲಿ ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಸಮಾಧಾನಪಡಿಸಲು ಯತ್ನಿಸಿದರೂ ಆರೋಪಿಗಳು ಕಿರುಚಾಟ ಮುಂದುವರಿಸಿದ್ದರು. ಈ ಕುರಿತು ಮಂಗಳೂರು ಕದ್ರಿ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.

You may also like