Home » ಬೆಳ್ತಂಗಡಿ: ಸ್ಕೂಟ‌ರ್ ಅಪಘಾತ; ಸವಾರ ಗಂಭೀರ, ವಾರಸುದಾರರ ಪತ್ತೆಗೆ ಮನವಿ

ಬೆಳ್ತಂಗಡಿ: ಸ್ಕೂಟ‌ರ್ ಅಪಘಾತ; ಸವಾರ ಗಂಭೀರ, ವಾರಸುದಾರರ ಪತ್ತೆಗೆ ಮನವಿ

0 comments

 

ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ (ಏಪ್ರಿಲ್ 23) ತಡರಾತ್ರಿ ಸುಮಾರು ಒಂದು ಗಂಟೆ ಸುಮಾರಿಗೆ ಭೀಕರ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದೆ.

ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ KA 70 K 6410 ನಂಬರಿನ ಸ್ಕೂಟಿ ಸವಾರನು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದಾನೆ. ಪ್ರತ್ಯಕ್ಷದರ್ಶಿಗಳ ಮಾಹಿತಿಯಂತೆ, ಸವಾರನು ಅತೀ ವೇಗ ಹಾಗೂ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸವಾರನ ಗುರುತು ಇನ್ನು ಪತ್ತೆಯಾಗಿಲ್ಲ.

ಅಪಘಾತ ಕಂಡ ತಕ್ಷಣ ಸ್ಥಳೀಯರು ಧಾವಿಸಿ ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

banner

ವಾಹನದ ಆರ್.ಸಿ (RC) ದಾಖಲೆಯಲ್ಲಿ ಕಡಬದ ವಿಳಾಸವಿದ್ದು, ಅದರಲ್ಲಿ 6360868709 ಮೊಬೈಲ್ ಸಂಖ್ಯೆ ನಮೂದಾಗಿದೆ. ಈ ಬಗ್ಗೆ ಈಗಾಗಲೇ ಕಡಬ ಮತ್ತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ.

ಗಾಯಾಳುವಿನ ಬಗ್ಗೆ ಮಾಹಿತಿ ಇರುವವರು ಅಥವಾ ವಾರಸುದಾರರು ಕೂಡಲೇ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ: ಬೆಳ್ತಂಗಡಿ ಸಂಚಾರ, ಪೊಲೀಸ್ ಠಾಣಾಧಿಕಾರಿ
: 9148996892

You may also like