ಬೆಳ್ತಂಗಡಿ: ದ. ಕ. ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಪುತ್ತೂರು ವಿಭಾಗಾಧಿಕಾರಿ (3ನೇ ಬಾರಿ) ಹೊರಡಿಸಿರುವ ಆದೇಶ ಪ್ರಶ್ನಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟಿನಲ್ಲಿ ಎ. 24ರಂದು ನಡೆಯಿತು.


ನ್ಯಾಯಮೂರ್ತಿ ಸಚಿನ್ ಶಂಕರ್ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶವನ್ನು ಎ.29ಕ್ಕೆ ಕಾಯ್ದಿರಿಸಿದೆ. ತಿಮರೋಡಿ ಪರ ವಕೀಲರು, ಅರ್ಜಿದಾರರ ವಿರುದ್ಧ ದಾಖಲಾದ ಎಲ್ಲ ಹೊಸ ಕ್ರಿಮಿನಲ್ ಪ್ರಕರಣಗಳು ಗಡೀಪಾರು ಪ್ರಸ್ತಾವನೆಗೆ ಸಂಬಂಧಿಸಿ ಪೊಲೀಸರ ವರದಿ ನಂತರ ದಾಖಲಾಗಿವೆ ಎಂದರು. ನಿಮ್ಮ ಮೇಲೇಯೇ ಕೇಸ್ ಏಕೆ ಬೇರೆ ಯಾರೂ ಸಿಗುತ್ತಿಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು.
