Home » ಚಿಕ್ಕಮಗಳೂರು: ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

ಚಿಕ್ಕಮಗಳೂರು: ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

0 comments

ಚಿಕ್ಕಮಗಳೂರು; ಬಾತುಕೋಳಿ ಹಿಡಿಯಲು ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ನಡೆದಿದೆ.

ಮಹಾದಿಯಾ, ಅರುನುಸ್‌, ನಾಯುಸ್‌ ಮತ್ತು ಅಬ್ದುಲ್‌ ರೆಹಮಾನ್‌ ಎಂಬ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಇವರು ಎಲ್ಲರೂ 5ರಿಂದ 12 ವರ್ಷದೊಳಗಿನವರಾಗಿದ್ದಾರೆ.

ನಾಲ್ಕು ವರ್ಷದ ಅರ್ಮಾನ್‌ ಎಂಬ ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾನೆ. ಆತನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಂಬಂಧಿಕರ ಮನೆಗೆಂದು ಬಂದಿದ್ದ ಮಕ್ಕಳು ಆಟವಾಡುತ್ತಿದ್ದ ವೇಳೆ ಬಾತುಕೋಳಿ ಕೆರೆಗೆ ಹೋಗಿರುವುದನ್ನು ನೋಡಿ ಅದನ್ನು ಹಿಡಿಯಲು ಕೆರೆಗೆ ಇಳಿದಿದ್ದು, ಈ ವೇಳೆ ಆಳವಾದ ನೀರಿನಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ. ಈ ಘಟನೆ ತಿಳಿದ ತಕ್ಷಣ ಸ್ಥಳೀಯರು ಹಾಗೂ ಪೋಷಕರು ಕೆರೆಗೆ ಬಂದಿದ್ದು, ಮಕ್ಕಳನ್ನು ರಕ್ಷಿಸುವ ಕೆಲಸ ಮಾಡಿದರೂ ಫಲಕಾರಿಯಾಗಿಲ್ಲ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.

banner

ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like