Home » ತುಮಕೂರಿನಲ್ಲಿ ಭೀಕರ ಅಪಘಾತ: ಬಜರಂಗದಳ ಕಾರ್ಯಕರ್ತರಿಬ್ಬರ ಸಾವು

ತುಮಕೂರಿನಲ್ಲಿ ಭೀಕರ ಅಪಘಾತ: ಬಜರಂಗದಳ ಕಾರ್ಯಕರ್ತರಿಬ್ಬರ ಸಾವು

0 comments

ತುಮಕೂರಿನ ಕುಣಿಗಲ್‌ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಭಜರಂಗದಳದ ಕಾರ್ಯಕರ್ತರಾದ ಆಕಾಶ್‌ (29), ಮಂಜುನಾಥ್‌ (34) ಮೃತಪಟ್ಟ ಘಟನೆ ನಡೆದಿದೆ. ತುಮಕೂರಿನಿಂದ ಕುಣಿಗಲ್‌ ಕಡೆಗೆ ವೇಗವಾಗಿ ಬಂದ ಬೊಲೆರೋ ವಾಹನ ಬೈಕ್‌ಗೆ ಡಿಕ್ಕಿಯಾಗಿ ಅಪಘಾತ ನಡೆದಿದೆ.

ವೇಗವಾಗಿ ಬಂದ ಬೊಲೆರೋ ವಾಹನ ಬೈಕ್‌ಗೆ ಡಿಕ್ಕಿಯಾಗಿ, ಡಿಕ್ಕಿ ರಭಸಕ್ಕೆ ಸ್ಥಳದಲ್ಲಿಯೇ ಆಕಾಶ್‌ ಮೃತಪಟ್ಟರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮಂಜುನಾಥ್‌ ಸಾವು ಕಂಡಿದ್ದಾರೆ. ಕುಣಿಗಲ್‌ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

You may also like