ತಮಿಳುನಾಡಿನಲ್ಲಿ ನಟ ವಿಜಯ್ ದಳಪತಿ ನೇತೃತ್ವದ ಟಿ ವಿ ಕೆ ಪಾರ್ಟಿ ಭರ್ಜರಿ ಜಯಭೇರಿ ಬಾರಿಸಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಇದುವರೆಗೂ ಸರ್ಕಾರ ರಚಿಸಲು ಕಾನೂನು ಹೋರಾಟ ಮಾಡುತ್ತಿದ್ದ ದಳಪತಿಗೆ ಇದೀಗ ರಾಜ್ಯಪಾಲರು ಸರ್ಕಾರ ರಚಿಸಲು ಭೀಮ ಟೆಕ್ನಲ್ ಕೊಟ್ಟಿದಾರೆ. ಈ ಹಿನ್ನಲೆಯಲ್ಲಿ ನಾಳೆ ವಿಜಯ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದ್ದಾರೆ. ಈ ಮೂಲಕ ಬೆಳ್ಳಿತೆರೆಯ ‘ದಳಪತಿ’ ಈಗ ಅಧಿಕೃತವಾಗಿ ರಾಜ್ಯದ ಸಾರಥಿಯಾಗಲು ಸಜ್ಜಾಗಿದ್ದಾರೆ. ಹೀಗಾಗಿ ಇನ್ನು ಮುಂದೆ ತಮಿಳುನಾಡಿನಲ್ಲಿ ದ್ರಾವಿಡರ ಆಡಳಿತ ಕೊನೆಗೊಳ್ಳಲಿದೆ.
ಟಿವಿಕೆ ಪಕ್ಷವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದಲ್ಲದೆ, ಮಿತ್ರಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲವನ್ನು (118+) ಸಾಬೀತುಪಡಿಸುವಲ್ಲಿ ಯಶಸ್ವಿಯಾಯಿತು. ವಿಜಯ್ ಅವರು ಸಲ್ಲಿಸಿದ ಹಕ್ಕು ಮಂಡನೆ ಮತ್ತು ಶಾಸಕರ ಬೆಂಬಲ ಪತ್ರವನ್ನು ಕೂಲಂಕಷವಾಗಿ ಪರಿಶೀಲಿಸಿದ ತಮಿಳುನಾಡು ರಾಜ್ಯಪಾಲರು, ಸರ್ಕಾರ ರಚನೆಗೆ ಅಧಿಕೃತ ಆಹ್ವಾನ ನೀಡಿದ್ದಾರೆ.
ದಳಪತಿ ವಿಜಯ್ ನೇತೃತ್ವದ ಟಿವಿಕೆಗೆ ಈಗಾಗಲೇ ಕಾಂಗ್ರೆಸ್ ಕಂಡೀಷನಲ್ ಬೆಂಬಲ ನೀಡಿದೆ. ಇದೀಗ ಸಿಪಿಐ, ಸಿಪಿಎಂ ಹಾಗೂ ವಿಸಿಕೆ ಕೂಡ ಬೆಂಬಲ ಘೋಷಿಸಿದ್ದು, ವಿಜಯ್ ಸುಲಭವಾಗಿ ಮ್ಯಾಜಿಕ್ ನಂಬರ್ ದಾಟಿದಂತಾಗಿದೆ. ಟಿವಿಕೆ ಒಟ್ಟು 107, ಸಿಪಿಐ, 2 ಸಿಪಿಎಂ, 2 ವಿಸಿಕೆ, 2 ಕಾಂಗ್ರೆಸ್ 5 ಐದು ಸೇರಿ 118 ಆಗಲಿದೆ. ಹೀಗಾಗಿ ಸರ್ಕಾರ ರಚನೆಯ ಹಾದಿ ಸುಗಮವಾಗಿದ್ದು, ಟಿವಿಕೆ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
ಅಂತೂ ವಿಜಯ್ ನಾಳೆ ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

