ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕರ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಧರ್ಮಸ್ಥಳದ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಎಂಬವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಮಟ್ಟಣ್ಣನವರ್ ಅವರು ತಮ್ಮ ಇನ್ಸ್ಟಾಗ್ರಾಂ ಮೂಲಕ ಸತ್ಯಕ್ಕೆ ದೂರವಾದ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಡಾ. ಹೆಗ್ಗಡೆಯವರ ವ್ಯಕ್ತಿತ್ವಕ್ಕೆ ಕುಂದು ತರಲು ಯತ್ನ ಮಾಡಿದ್ದಾರೆ, ಜೊತೆಗೆ ಸಮಾಜದಲ್ಲಿ ದ್ವೇಷ ಮತ್ತು ವೈಮನಸ್ಸು ಉಂಟು ಮಾಡಲು ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.
ಈ ದೂರಿಗೆ ಸಂಬಂಧಿಸಿದಂತೆ ಏಪ್ರಿಲ್ 18ರಂದೇ ಭಾರತೀಯ ನ್ಯಾಯ ಸಂಹಿತೆ (BNS-2023) ಸೆಕ್ಷನ್ 353(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಮೇ 7ರಂದು ಗಿರೀಶ್ ಮಟ್ಟಣ್ಣವರ್ ಅವರು ಬೆಂಗಳೂರಿನ ಎಸ್ಐಟಿ (SIT) ಕಚೇರಿಗೆ ಹಾಜರಾಗಿರುವ ಮಾಹಿತಿ ತಿಳಿದ ಧರ್ಮಸ್ಥಳದ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಅವರು, ನೇರವಾಗಿ ಬೆಂಗಳೂರಿಗೆ ತೆರಳಿ ಅಲ್ಲಿಯೇ ಮಟ್ಟಣ್ಣವರ್ ಅವರಿಗೆ ನೋಟಿಸ್ ನೀಡಿದ್ದಾರೆ. ನೋಟಿಸ್ ಸ್ವೀಕರಿಸಿದ ಒಂದು ವಾರದೊಳಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

