Home » ಜಾಮೀನಿಗೆ ಅರ್ಜಿ ಸಲ್ಲಿಸಿ ಸಂಕಷ್ಟಕ್ಕೆ ಸಿಲುಕಿದ ದರ್ಶನ್ – ಮತ್ತೊಂದು ವರ್ಷ ಜೈಲಲ್ಲಿರುವಂತೆ ಸುಪ್ರೀಂ ಕೋರ್ಟ್ ತೀರ್ಪು

ಜಾಮೀನಿಗೆ ಅರ್ಜಿ ಸಲ್ಲಿಸಿ ಸಂಕಷ್ಟಕ್ಕೆ ಸಿಲುಕಿದ ದರ್ಶನ್ – ಮತ್ತೊಂದು ವರ್ಷ ಜೈಲಲ್ಲಿರುವಂತೆ ಸುಪ್ರೀಂ ಕೋರ್ಟ್ ತೀರ್ಪು

0 comments

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಪ್ರಮುಖ ಆರೋಪಿ ನಟ ದರ್ಶನ್ ಸುಪ್ರೀಂ ಕೋರ್ಟಿಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ  ಭಾರೀ ಹಿನ್ನಡೆಯಾಗಿದೆ. ಅಲ್ಲದೆ ಇನ್ನು ಒಂದು ವರ್ಷ ಜೈಲಿನಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ

ಯಸ್, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಆಗಿರುವ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದು, ಇದೀಗ ಸುಪ್ರೀಂ ಕೋರ್ಟಲ್ಲಿ ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣ ಸಂಬಂಧ ಉಳಿದ ಪ್ರಮುಖ ಆರೋಪಿಗಳ ವಿಚಾರಣೆಗೆ ಒಂದು ವರ್ಷ ಸಮಯ ನೀಡಿದ್ದು ಹಾಗಾಗಿ ನಟ ದರ್ಶನ್ ಇನ್ನೂ ಒಂದು ವರ್ಷ ಜೈಲಲ್ಲಿ ಕಾಲ ಕಳೆಯ ಬೇಕಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ವಿಜಯ್ ಬಿಷ್ನೋಯಿ ಅವರ ಪೀಠದಲ್ಲಿ ಬೇಲ್ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದರು. ವಿಚಾರಣೆ ವೇಳೆ 272 ಸಾಕ್ಷಿಗಳಲ್ಲಿ 10 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದಾರೆ. 150 ಸಾಕ್ಷಿಗಳ ವಿಚಾರಣೆ ಮಾಡುತ್ತೇವೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಜೈಲಿನಲ್ಲಿ ದರ್ಶನ್ ಗೆ ಕನಿಷ್ಠ ಮೂಲ ಸವಲತ್ತು ಸಹ ನೀಡಿಲ್ಲ. ಈ ವೇಳೆ ನಿಮಗೆಲ್ಲಾ ಕನಿಷ್ಠ ಸವಲತ್ತು ನೀಡಲಾಗಿದೆ. ಪ್ರಮಾಣ ಪತ್ರದಲ್ಲಿ ಅಧಿಕಾರಿಗಳು ಹೇಳಿಕೆ ಕೊಟ್ಟಿದ್ದಾರೆ ಎಂದು ಇದೆ ವೇಳೇ ಜಡ್ಜ್ ಮುಕುಲ್ ಅವರ ವಾದ ತಳ್ಳಿ ಹಾಕಿದರು. ಬಳಿಕ ಒಂದು ವರ್ಷದೊಳಗೆ ವಿಚಾರಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಕೋರ್ಟ್‌ (Supreme Court) ಅಲ್ಲಿಯವರೆಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಆದೇಶದಿಂದ ಮುಂದಿನ ವರ್ಷ ಮೇ 15ರವರೆಗೆ ದರ್ಶನ್‌ಗೆ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಈವರೆಗೆ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ತಿಳಿದ ನ್ಯಾಯಪೀಠವು ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿತು. ಪ್ರಾಸಿಕ್ಯೂಷನ್ ವಾದ ಮಂಡಿಸಿದ ಹಿರಿಯ ವಕೀಲ ಸಿದ್ದಾರ್ಥ ಲೂತ್ರಾ, “17 ಆರೋಪಿಗಳ ಪರ ವಕೀಲರು ಪಾಟಿಸವಾಲು (Cross-examination) ಮಾಡುವಾಗ ಒಂದೊಂದು ಸಾಕ್ಷಿಗೆ 5-6 ದಿನ ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ವಿಳಂಬವಾಗುತ್ತಿದೆ ಎಂದ ಉತ್ತರಿಸಿದರು. ಇನ್ನೂ 172ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಾಕಿ ಇರುವಾಗ ಇಷ್ಟು ಬೇಗ ಜಾಮೀನು ತೀರ್ಮಾನಕ್ಕೆ ಬರಲು ಹೇಗೆ ಸಾಧ್ಯ? ಟ್ರಯಲ್ ನಿಧಾನವಾಗಿರುವುದು ಸತ್ಯ ಎಂದು ಅಭಿಪ್ರಾಯಪಟ್ಟರು. ದರ್ಶನ್ ಪರ ವಕೀಲ ಮುಕುಲ್ ರೊಹಟಗಿ ಅವರ ವಾದ ಮತ್ತು ಸರ್ಕಾರದ ಪರ ವಾದಗಳನ್ನು ಆಲಿಸಿದ ನ್ಯಾಯಾಲಯ ಸದ್ಯಕ್ಕೆ ಅರ್ಹತೆ ಆಧಾರದ ಮೇಲೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿ ಕೆಲ ಮಹತ್ವದ ಆದೇಶ ನೀಡಿ ಜಾಮೀನು ಅರ್ಜಿಯನ್ನು ಇತ್ಯರ್ಥ ಮಾಡಿತು.

banner

You may also like