Home » ಸಮಸ್ಯೆಗೆ ಪರಿಹಾರ ಕೇಳಿದರೆ ಉಡಾಫೆ ಉತ್ತರ – ದ. ಕ ಬಿಜೆಪಿ ಸಂಸದ ಚೌಟ ವಿರುದ್ಧ ಕಾರ್ಯಕರ್ತರ ಅಕ್ರೋಶ

ಸಮಸ್ಯೆಗೆ ಪರಿಹಾರ ಕೇಳಿದರೆ ಉಡಾಫೆ ಉತ್ತರ – ದ. ಕ ಬಿಜೆಪಿ ಸಂಸದ ಚೌಟ ವಿರುದ್ಧ ಕಾರ್ಯಕರ್ತರ ಅಕ್ರೋಶ

0 comments

ಹೆದ್ದಾರಿ ಸಮಸ್ಯೆಗೆ ಪರಿಹಾರವನ್ನು ಕಂಡುಕೊಡಿ ಎಂದು ಕೇಳಿದ್ದಕ್ಕೆ ಉಡಾಫೆ ಉತ್ತರ ನೀಡಿರುವ ಕಾರಣ ದಕ್ಷಿಣ ಕನ್ನಡದ ಬಿಜೆಪಿ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಕಳ – ಮೂಡಬಿದಿರೆ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ರಸ್ತೆಯ ಅವೈಜ್ಞಾನಿಕ ಕಾಮಗಾರಿ ಹಾಗೂ ಅಲ್ಲಿ ಸಂಭವಿಸುತ್ತಿರುವ ಸರಣಿ ಅಪಘಾತಗಳ ಕುರಿತು ಸಾರ್ವಜನಿಕರಲ್ಲಿ ತೀವ್ರ ಕಳವಳವಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೋರಿ ಹಾಗೂ ಅಪಘಾತಗಳಿಂದ ಜೀವಹಾನಿಯಾಗುತ್ತಿರುವ ಬಗ್ಗೆ ಪ್ರಶ್ನಿಸಲು ಹೋದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಸಂಸದರು ಬೇಜವಾಬ್ದಾರಿಯ ಹಾಗೂ ಉಡಾಫೆಯ ಉತ್ತರ ನೀಡಿದ್ದಾರೆ ಎನ್ನಲಾಗಿದ್ದು ಇದು ಕೇಸರಿಪಡೆಯ ಕಾರ್ಯಕರ್ತರನ್ನು ರೊಚ್ಚಿಗೇಳಿಸಿದೆ.

ಸಂಸದರ ಈ ವರ್ತನೆಯಿಂದ ತೀವ್ರ ಬೇಸರಗೊಂಡಿರುವ ಕಾರ್ಯಕರ್ತರು, “ಇಂತಹವರು ನಮ್ಮ ಜನಪ್ರತಿನಿಧಿಯಾಗಿರುವುದು ದುರಂತ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಪಕ್ಷದ ಸಂಸದರ ವಿರುದ್ಧವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವುದು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದೆ.

You may also like