Home » ದೆವ್ವ ಹಿಡಿದಿದೆ ಎಂದು ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿಗೆ ಮಗು ಜನನ!!

ದೆವ್ವ ಹಿಡಿದಿದೆ ಎಂದು ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿಗೆ ಮಗು ಜನನ!!

0 comments

ದೆವ್ವ ಹಿಡಿದಿದೆ ಎಂದು ಭಾವಿಸಿ ದೇವಸ್ಥಾನಕ್ಕೆ ಕರೆದೊಯ್ದ ಅಪ್ರಾಪ್ತ ಬಾಲಕಿ ಒಬ್ಬಳಿಗೆ ಮಗು ಜನನ ವಾಗಿರುವ ಅಘಾತಕಾರಿ ಘಟನೆ ಒಂದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.

ಕೆಲವು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯು ತೀವ್ರ ಕೈ-ಕಾಲು ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಆದರೆ, ತೀವ್ರ ಮೂಢನಂಬಿಕೆಗೆ ಒಳಗಾಗಿದ್ದ ಆಕೆಯ ಪೋಷಕರು, ಮಗಳಿಗೆ ದೆವ್ವ ಹಿಡಿದಿದೆ ಎಂದು ಭಾವಿಸಿದ್ದರು. ಬಳಿಕ ದೇವಸ್ಥಾನದವರ ಸೂಚನೆಯಂತೆ ಪೋಷಕರು ಬಾಲಕಿಯನ್ನು ನಾಯಕನಹಟ್ಟಿಯ ಅಜ್ಜಯ್ಯನ ಗುಡಿಗೆ ಕರೆದುಕೊಂಡು ಬಂದಾಗ ಬಾಲಕಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ನೀಚ ಕೃತ್ಯಕ್ಕೆ ಟ್ರ್ಯಾಕ್ಟರ್ ಚಾಲಕ ಕಾರಣ ಎಂದು ತಿಳಿದುಬಂದಿದೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಚೋಗಳೇರಿ ಹಟ್ಟಿ ಗ್ರಾಮದ ಟ್ರ್ಯಾಕ್ಟರ್ ಚಾಲಕ ಮಂಜಣ್ಣ (30) ಬಂಧಿತ ಆರೋಪಿ. ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 

You may also like