Home » ಮಂಗಳೂರು: ರೆಖ್ಯ ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿ ನಿವಾಸಿ ನಾಪತ್ತೆ

ಮಂಗಳೂರು: ರೆಖ್ಯ ಸಂಬಂಧಿಕರ ಮನೆಗೆ ಬಂದಿದ್ದ ನೆಲ್ಯಾಡಿ ನಿವಾಸಿ ನಾಪತ್ತೆ

0 comments

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾದವರನ್ನು ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ವಿತ್ ಕುಮಾರ್ (37) ಎಂದು ಗುರುತಿಸಲಾಗಿದೆ.

ಅಶ್ವಿತ್ ಕುಮಾರ್ ಅವರು ಮೇ 17ರಂದು ಸಂಜೆ ಸುಮಾರು 4.15 ರ ವೇಳೆಗೆ ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆತಂಕಗೊಂಡ ಕುಟುಂಬಸ್ಥರು ಸ್ಥಳೀಯರ ಸಹಕಾರದೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಘಟನೆಯ ಮಾಹಿತಿ ತಿಳಿದು ಶೌರ್ಯ ವಿಪತ್ತು ನಿರ್ವಹಣಾ ತಂಡ ಕೂಡ ಕಾರ್ಯಾಚರಣೆಗೆ ಇಳಿದು ವಿವಿಧ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿಸಿದೆ.

banner

ಈ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಅಶ್ವಿತ್‌ ಕುಮಾರ್ ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

You may also like