ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಇದೀಗ ಕುಟುಂಬ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿ ತಮ್ಮ ಪ್ರಾಮಾಣಿಕತೆಯನ್ನು ಮೆರೆದಿತ್ತು. ಇದೀಗ ಈ ಚಿನ್ನದ ವಿಚಾರಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅದು ಕೂಡ ಕರ್ನಾಟಕ ಸರ್ಕಾರವೇ ಈ ಟ್ವಿಸ್ಟ್ ನೀಡಿದೆ.


ಹೌದು, ಈ ನಿಧಿ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ರಾಜ್ಯ ಸರ್ಕಾರವು ಮಹತ್ವದ ವಿಷಯವನ್ನು ರಿವೀಲ್ ಮಾಡಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದ ನಿಧಿಯ ಅಂದಾಜು ಮೌಲ್ಯವೇ ಬರೋಬ್ಬರಿ 8 ಕೋಟಿ ರೂಪಾಯಿ ಇದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ. ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಮಿತಿ ಸಭೆಯ ನಂತರ ಅವರು ಮಾತನಾಡಿದ್ದಾರೆ. ಗದಗ ಜಿಲ್ಲೆಯಲ್ಲಿ ಪತ್ತೆಯಾಗಿರುವ ಆಭರಣಗಳು 600 ವರ್ಷಗಳಷ್ಟು ಹಳೆಯದಾಗಿವೆ. ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಆಂಟಿಕ್ (ಪ್ರಾಚೀನ) ಒಡವೆಗಳಾಗಿವೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಇದಕ್ಕೆ ಬೃಹತ್ ಮೌಲ್ಯವಿದೆ ಎಂದು ಹೇಳಿದ್ದಾರೆ.
ಅಲ್ಲದೆ ಈ ಜಿಲ್ಲೆಯಲ್ಲಿ ಈಗಾಗಲೇ 600 ವರ್ಷಗಳಷ್ಟು ಹಳೆಯ ಚಿನ್ನಾಭರಣ ಸಿಕ್ಕಿದೆ. ಮುಂದುವರಿದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಇಲ್ಲಿಯ ವರೆಗೆ 32 ದೇವರ ಗುಡಿಗಳು ಮತ್ತು 36 ಬಾವಿಗಳನ್ನು ಪತ್ತೆ ಮಾಡಲಾಗಿದೆ. ಮುಂದುವರಿದು 68 ಗುಡಿಗಳು, 64 ಬಾವಿಗಳನ್ನು ಉತ್ಖನನ ಮಾಡಬೇಕಿದೆ. ಈ ಉತ್ಖನನ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು
