Home » ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ – SIT ತಂಡದಿಂದ ಮತ್ತೆ ಬಂಗ್ಲೆಗುಡೆ ಕಾಡಿನಲ್ಲಿ ಕಾರ್ಯಾಚರಣೆ

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ – SIT ತಂಡದಿಂದ ಮತ್ತೆ ಬಂಗ್ಲೆಗುಡೆ ಕಾಡಿನಲ್ಲಿ ಕಾರ್ಯಾಚರಣೆ

0 comments

ಧರ್ಮಸ್ಥಳ ಗ್ರಾಮದ ಬುರುಡೆ ರಹಸ್ಯ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದ್ದು, 4 ತಿಂಗಳ ಹಿಂದೆ 7 ಅಸ್ಥಿಪಂಜರ ಪತ್ತೆಯಾಗಿದ್ದ ಬಂಗ್ಲೆಗುಡ್ಡೆ ಕಾಡಿನಲ್ಲಿ ಎಸ್ಐಟಿ ತಂಡವು ಮತ್ತೆ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಹಿನ್ನಲೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ತಂಡ (FSL Team) ಭೇಟಿ ನೀಡಿದೆ.

ಮೂವರು ಅಧಿಕಾರಿಗಳನ್ನೊಳಗೊಂಡ ಎಫ್‌ಎಸ್‌ಎಲ್‌ ಅಧಿಕಾರಿಗಳ ತಂಡ ಇಂದು ಬೆಂಗಳೂರಿನಿಂದ (Bengaluru) ಎಸ್‌ಐಟಿ ಅಧಿಕಾರಿಗಳೊಂದಿಗೆ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದೆ. 4 ತಿಂಗಳ ಹಿಂದೆ 4 ತಿಂಗಳ ಹಿಂದೆ 7 ಅಸ್ಥಿಪಂಜರ ಸಿಕ್ಕಿದ್ದ ಜಾಗದಲ್ಲಿ ಪರಿಶೀಲನೆ ನಡೆಸಿದೆ. ಅಲ್ಲದೇ ಆರೋಪಿ ಪ್ರದೀಪ್ ಕುಲಾಲ್‌ನನ್ನ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಲಾಗಿದೆ. ಈ ಮೂಲಕ ಎಸ್​ಐಟಿ ಅಧಿಕಾರಿಗಳು ಬಂಗ್ಲೆ ಗುಡ್ಡೆಯಲ್ಲಿ ಮತ್ತೆ ಕಾರ್ಯಾಚರಣೆಗೆ ಇಳಿದಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು ತಿಂಗಳುಗಳ ನಂತರ ಮತ್ತೆ ಫೀಲ್ಡಿಗಿಳಿದಿರುವ ಎಸ್​ಐಟಿ ಅಧಿಕಾರಿಗಳು, ಬಂಗ್ಲೆ ಗುಡ್ಡೆಗೆ ಎಫ್​​ಎಸ್​ಎಲ್ ತಜ್ಞರ ಜೊತೆ ಬುರುಡೆ ಪ್ರಕರಣದಲ್ಲಿ ಎಸ್​ಐಟಿ ವಿಚಾರಣೆಗೆ ಒಳಪಟ್ಟಿದ್ದ ಪ್ರದೀಪ್ ಕುಲಾಲ್ ಎಂಬಾತನನ್ನು ಸಹ ಕರೆತಂದಿದ್ದಾರೆ. ಬಂಗ್ಲಗುಡ್ಡೆ ಕಾಡಿನಲ್ಲಿ ರಾತ್ರಿ ಹೊತ್ತು ಬುರುಡೆ ಹೊರತೆಗೆಯುವ ವಿಡಿಯೋದಲ್ಲಿದ್ದ ಪ್ರದೀಪ್ ಕುಲಾಲ್, ಪ್ರಕರಣದ ಕುರಿತು BNSS ಸೆಕ್ಷನ್ 183 ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಈ ಹಿನ್ನೆಲೆ ಆತನನ್ನು ಬಂಗ್ಲಗುಡ್ಡಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

You may also like