Home » ಗೃಹಲಕ್ಷ್ಮಿ ಹಾಗೂ ಗೃಹಜೋತಿ ಯೋಜನೆಗಳ ಫಲಾನುಭವಿಗಳಿಗೆ ಶಾಕ್ – ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆಗೆ ಸರ್ಕಾರ ಸಿದ್ಧತೆ!!

ಗೃಹಲಕ್ಷ್ಮಿ ಹಾಗೂ ಗೃಹಜೋತಿ ಯೋಜನೆಗಳ ಫಲಾನುಭವಿಗಳಿಗೆ ಶಾಕ್ – ಗ್ಯಾರೆಂಟಿ ಯೋಜನೆಗಳ ಪರಿಷ್ಕರಣೆಗೆ ಸರ್ಕಾರ ಸಿದ್ಧತೆ!!

0 comments

ಕರ್ನಾಟಕ ರಾಜ್ಯ ಕಾಂಗ್ರೆಸ್‌ 2023ರ ವಿಧಾನಸಭಾ ಚುನಾವಣೆಯಲ್ಲಿ ಕರುನಾಡಿನ ಗದ್ದುಗೆ ಏರಲು ಪ್ರಯೋಗಿಸಿದ್ದ ಅಸ್ತ್ರವೇ ʼಪಂಚ ಗ್ಯಾರಂಟಿʼ ಯೋಜನೆಗಳು. ಇದೀಗ ಸರ್ಕಾರ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು ಫಲಾನುಭವಿಗಳಿಗೆ ಶಾಕ್‌ ನೀಡಲು ಸಜ್ಜಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಹೆಚ್ಚು ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಹಲವು ತಾಂತ್ರಿಕ ದೋಷಗಳು ಹಾಗೂ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಕರ್ನಾಟಕ ಸರ್ಕಾರ ಗೃಹ ಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಿಸಲು ನಿರ್ಧರಿಸಿದ್ದು, ಮೃತಪಟ್ಟವರು, ಆದಾಯ ತೆರಿಗೆ ಪಾವತಿದಾರರು ಮತ್ತು ಒಂದೇ ಮನೆಯಲ್ಲಿ ಇಬ್ಬರು ಲಾಭ ಪಡೆಯುವ ಅನರ್ಹರನ್ನು ಪಟ್ಟಿಯಿಂದ ತೆಗೆದುಹಾಕಿ, ಅರ್ಹ ಬಡವರಿಗೆ ಮಾತ್ರ ಯೋಜನೆ ತಲುಪಿಸಲು ಮುಂದಾಗಿದೆ.

ಸರ್ಕಾರದ ಉದ್ದೇಶವೇನು?

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕಿ ಸರ್ಕಾರದ ಹಣ ಪೋಲಾಗುವುದನ್ನು ತಪ್ಪಿಸುವು. ಸರ್ಕಾರಿ ಯೋಜನೆಗಳಲ್ಲಿ ಪಾರದರ್ಶಕತೆ ತರುವ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರ ಸೌಲಭ್ಯಗಳು ಸಿಗುವಂತಾಗಬೇಕು ಎಂಬ ಸದುದ್ದೇಶದಿಂದ ಸರ್ಕಾರ ಇದೀಗ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಲು ನಿರ್ಧರಸಿದೆ.

banner

You may also like