ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರ ಹೆಸರು ಈಗಾಗಲೇ ಸಿಎಂ ಸ್ಥಾನಕ್ಕೆ ಕೇಳಿ ಬರುತ್ತಿದ್ದು, ಇದರ ಜೊತೆಗೆ ಗೃಹ ಸಚಿವ ಪರಮೇಶ್ವರ್ ಹೆಸರು ಕೂಡಾ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗುತ್ತಿರುವುದಾಗಿ ವರದಿಯಾಗಿದೆ.


ರಾಹುಲ್ ಗಾಂಧಿ ಮಾತಿಗೆ ಒಪ್ಪಿದ ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೆ ಸಮ್ಮತಿ ನೀಡಿದ್ದಾರೆ. ಆದರೆ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹೆಸರಿನ ಬದಲು ಪರಮೇಶ್ವರ್ ಹೆಸರನ್ನು ಸೂಚಿಸಿರುವುದಾಗಿ ವರದಿಯಾಗಿದೆ.
ರಾಹುಲ್ ಗಾಂಧಿ ಕೇಳಿದ ಮುಖ್ಯಮಂತ್ರಿ ಹೆಸರಿಗೆ ಯಾರನ್ನು ಸೂಚಿಸುತ್ತೀರಿ ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಡಾ.ಜಿ.ಪರಮೇಶ್ವರ್ ಹೆಸರನ್ನು ಶಿಫಾರಸು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಹೆಸರು ಕೂಡಾ ಸಿಎಂ ಸ್ಥಾನದಲ್ಲಿ ಕೇಳಿ ಬರುತ್ತಿದೆ.
ಆದರೆ ಹೈಕಮಾಂಡ್ ನಾಯಕರಾಗಲಿ, ರಾಹುಲ್ ಗಾಂಧಿಯಾಗಲಿ ಈ ಕುರಿತು ತೀರ್ಮಾನ ತಗೊಂಡಿಲ್ಲ.

